ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೂಡೂರ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ರುದ್ರಪ್ಪ ಗದಿಗೆಪ್ಪ ಕೋಣನವರ (40) ಮೃತ ರೈತ.
ಇವರು ಒಂದೂವರೆ ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ನಲ್ಲಿ 2 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಈ ಬಾರಿ ಅನಾವೃಷ್ಟಿಯಿಂದ ಬೆಳೆ ಹಾಳಾಗಿದ್ದರಿಂದ ನಷ್ಟ ಅನುಭವಿಸಿದ್ದರು. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.