More

    ಮಕ್ಕಳ ಬಸ್ಸು ಯೋಜನೆ ಪ್ರಾರಂಭಕ್ಕೆ ನಿರ್ಧಾರ;100 ಕೋಟಿ ರೂ. ವೆಚ್ಚದಲ್ಲಿ 1000 ಬಸ್ ಕಾರ್ಯಾಚರಣೆ

    ಬೆಂಗಳೂರು: ಶಾಲಾ-ಕಾಲೇಜು ಮಕ್ಕಳ ಬಸ್ಸಿನ ಸಮಸ್ಯೆ ನಿವಾರಣೆಗೆ ಮಕ್ಕಳ ಬಸ್ಸು ಯೋಜನೆ ಪ್ರಾರಂಭಿಸಲು ನಿರ್ಧರಿಸುವುದಾಗಿ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. 100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯಡಿ 1000 ಹೊಸ ಬಸ್ ಓಡಾಟ ನಡೆಸಲಿವೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ.

    ಅಲ್ಲದೆ ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭಿಸುವುದಾಗಿ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts