ಗ್ರಾಹಕರ ಜತೆ ವಾಗ್ವಾದಕ್ಕಿಳಿಯದಂತೆ ಬೆಸ್ಕಾಂ ಸೂಚನೆ

ಹೊನ್ನಾಳಿ: ಯಾರು ಸ್ವ ಇಚ್ಛೆಯಿಂದ ವಿದ್ಯುತ್ ಬಿಲ್ ಪಾವತಿಸುತ್ತಾರೋ ಅಂತಹವರಿಂದ ಮಾತ್ರ ಕಟ್ಟಿಸಿಕೊಳ್ಳಿ. ವಿನಾಕಾರಣ ಗ್ರಾಹಕರ ಜತೆ ವಾಗ್ವಾದಕ್ಕೆ ಇಳಿಯದಂತೆ ಬೆಸ್ಕಾಂ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಹೊನ್ನಾಳಿ ಬೆಸ್ಕಾಂ ಎಇಇ ಶ್ರೀನಿವಾಸ್ ಬಿ.ಕೆ. ತಿಳಿಸಿದರು.
ನೂತನ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಹಲವೆಡೆ ಗ್ರಾಹಕರು ವಿದ್ಯುತ್ ಬಿಲ್ ಪಾವತಿಸಲು ನಿರಾಕರಿಸುತ್ತಿದ್ದಾರೆ. ಕೊಪ್ಪಳದಲ್ಲಿ ಈಗಾಗಲೇ ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ. ಸರ್ಕಾರದಿಂದ ಅಧಿಕೃತ ಆದೇಶ ಬರುವವರೆಗೆ ಬಿಲ್ ಪಾವತಿಸುವಂತೆ ಸಿಬ್ಬಂದಿ ಮನವಿ ಮಾಡುತ್ತಿದ್ದರೂ ಅನೇಕ ಗ್ರಾಹಕರು ಒಪ್ಪುತ್ತಿಲ್ಲ ಎಂದರು.
ಪ್ರತಿ ತಿಂಗಳು 1- 15 ರವರೆಗೆ ವಿದ್ಯುತ್ ಬಿಲ್ ನೀಡಲಾಗುತ್ತದೆ. 30 ರೊಳಗೆ ಶೇ. 70 ರಿಂದ 75ರಷ್ಟು ಗ್ರಾಹಕರು ಬಿಲ್ ಪಾವತಿಸುತ್ತಿದ್ದರು. ಆದರೆ, ಉಚಿತ ಕೊಡುಗೆಯ ಭರವಸೆ ಹಿನ್ನೆಲೆಯಲ್ಲಿ ಈ ತಿಂಗಳು ಬಿಲ್ ಸಂದಾಯ ಕುಸಿದಿದೆ ಎಂದು ಮಾಹಿತಿ ನೀಡಿದರು.
ಸರ್ಕಾರದ ಯೋಜನೆ ಅನುಷ್ಠಾನಗೊಳ್ಳುವವರೆಗೂ ಬಿಲ್ ಕಟ್ಟಿಸಿಕೊಳ್ಳುವುದು ನಮ್ಮ ಕರ್ತವ್ಯ. ಆದರೆ, ಕೆಲ ಗ್ರಾಹಕರು ಇದನ್ನರ್ಥಮಾಡಿಕೊಳ್ಳದೇ ಸಿಬ್ಬಂದಿ ಜತೆ ವಾಗ್ವಾದಕ್ಕೆ ಇಳಿಯುತ್ತಾರೆ ಎಂದು ಬೇಸರಿಸಿದರು.
ಹೀಗಾಗಿ ಬಿಲ್ ಪಾವತಿ ವಿಚಾರದಲ್ಲಿ ಗ್ರಾಹಕರ ಜತೆ ವಾಗ್ವಾದಕ್ಕೆ ಇಳಿಯದಂತೆ ಸೂಚಿಸಿದ್ದೇವೆ ಎಂದರು.

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…