More

    ದೇಶವೇ ದೀಪಗಳಿಂದ ಜಗಮಗ; ಇಲ್ಲಿ ಮಾತ್ರ 230 ವರ್ಷಗಳಿಂದ ದೀಪಾವಳಿ ಆಚರಿಸಿಲ್ಲ!

    ಬೆಂಗಳೂರು: ದೇಶವೇ ದೀಪಗಳಿಂದ ಜಗಮಗಿಸುತ್ತಿದ್ದು, ಎಲ್ಲೆಡೆ ಬೆಳಕಿನ-ಸುಡುಮದ್ದುಗಳ ಸಡಗರ ಕಂಡುಬರುತ್ತಿದ್ದರೆ ಇಲ್ಲೊಂದು ಕಡೆ ಮಾತ್ರ ವರ್ಷಗಟ್ಟಲೆ ಕಾಲದಿಂದ ದೀಪಾವಳಿ ಹಬ್ಬ ಆಚರಣೆಯನ್ನೇ ಮಾಡಿಲ್ಲ.

    ಅಂದಹಾಗೆ ಇಂಥದ್ದೊಂದು ಊರು ಇರುವುದು ದೇಶದ ಯಾವುದೋ ಮೂಲೆಯಲ್ಲಲ್ಲ. ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆ ಗ್ರಾಮವೇ ಇಂಥದ್ದೊಂದು ಬೆಳವಣಿಗೆಗೆ ಸಾಕ್ಷಿಯಾಗಿದೆ. ಇಲ್ಲಿನ ಅಯ್ಯಂಗಾರ್ ಸಮುದಾಯ ಸುಮಾರು 230 ವರ್ಷಗಳಿಂದ ದೀಪಾವಳಿ ಹಬ್ಬ ಆಚರಿಸುತ್ತಿಲ್ಲ.

    ಇದನ್ನೂ ಓದಿ: 13 ಭಾಷೆಗಳಲ್ಲಿ ದೀಪಾವಳಿ ಶುಭಾಶಯ ಕೋರಿ ‘ಸಂಪ್ರದಾಯಗಳನ್ನು ಜೀವಂತವಾಗಿಡಿ’ ಎಂದ ಗೂಗಲ್

    ನರಕ ಚತುರ್ದಶಿಯ ವಾರ್ಷಿಕ ಹಬ್ಬ ಆಚರಿಸಲು 1790ರಲ್ಲಿ ಶ್ರೀರಂಗಪಟ್ಟಣದ ನರಸಿಂಹ ದೇವಸ್ಥಾನದ ಆವರಣದಲ್ಲಿ ನೆರೆದಿದ್ದ 800 ಅಮಾಯಕ ನಿರಾಯುಧ ಅಯ್ಯಂಗಾರ್ ಬ್ರಾಹ್ಮಣರನ್ನು ಟಿಪ್ಪು ಸುಲ್ತಾನ್ ಹತ್ಯೆ ಮಾಡಿಸಿದ್ದನು.

    ಇದನ್ನೂ ಓದಿ: ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರ್ಕಾರದ ವ್ಯವಸ್ಥಾಪನಾ ಸಮಿತಿ?: ಸ್ವಾಮೀಜಿಯ ವಿರೋಧ

    ಅಂದು ಟಿಪ್ಪು ಸುಲ್ತಾನ್ ಮೇಲುಕೋಟೆಯ ಈ 800 ಮನೆಗಳ ದೀಪಗಳನ್ನು ನಂದಿಸಿದ್ದು, ಇಂದಿಗೂ ಇಲ್ಲಿನ ಜನರ ಹೃದಯದಲ್ಲಿ ಆ ನೋವು ಮಾಸಿಲ್ಲ. ತಮ್ಮ ಪೂರ್ವಜರ ಸ್ಮರಣೆಯಲ್ಲಿ ಮೇಲುಕೋಟೆ ಗ್ರಾಮದ ಅಯ್ಯಂಗಾರ್​ ಬ್ರಾಹ್ಮಣರೂ ಇಂದಿಗೂ ದೀಪಾವಳಿ ಆಚರಿಸುತ್ತಿಲ್ಲ.

    ಇಲ್ಲಿ ‘ಯಮದೂತ’ನಿಗೇ ಪೂಜೆ ಮಾಡಿ ದೀಪಾವಳಿ ಹಬ್ಬ ಆಚರಣೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts