ಹೈದರಾಬಾದ್: ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದ ಚಿತ್ರೀಕರಣ ಮುಂದುವರೆಯುವುದು ಯಾವಾಗ? ಚಿತ್ರೀಕರಣಕ್ಕೆ ಆಲಿಯಾ ಭಟ್ ಬರುತ್ತಾರಾ? ಚಿತ್ರದ ಬಿಡುಗಡೆ ಯಾವಾಗ? ಇಂಥ ಪ್ರಶ್ನೆಗಳೇ ಹೆಚ್ಚಾಗಿ ಕೇಳಿ ಬರುತ್ತಿದ್ದವು.
ಇದನ್ನೂ ಓದಿ: ರವಿ ಬೆಳಗೆರೆ ನಿಧನಕ್ಕೆ ಕಂಬನಿ ಮಿಡಿದ ಸಿನಿಮಾ ಮಂದಿ
ಈಗ ಚಿತ್ರತಂಡದಿಂದ ಬೇರೆಯದೇ ಸುದ್ದಿ ಬಂದಿದೆ. ಚಿತ್ರತಂಡದವರು ಸೆಟ್ನಲ್ಲೇ ದೀಪಾವಳಿ ಹಬ್ಬವನ್ನು ಆಚರಿಸಿರುವುದಷ್ಟೇ ಅಲ್ಲ, ಸಮಸ್ತ ಜನತೆಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
‘ಆರ್ಆರ್ಆರ್’ ನಿರ್ದೇಶಕ ಎಸ್.ಎಸ್. ರಾಜಮೌಳಿ, ನಟರಾದ ಜ್ಯೂನಿಯರ್ ಎನ್ಟಿಆರ್, ರಾಮ್ಚರಣ್ ತೇಜ ಮುಂತಾದವರು ಸೆಟ್ನಲ್ಲಿ ಸಂಭ್ರಮಿಸುತ್ತಿರುವ ಕೆಲವು ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗಳಲ್ಲಿ ಮೂವರು ಸಾಂಪ್ರಾದಾಯಿಕ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಈ ಫೋಟೋಗಳ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
‘ಆರ್ಆರ್ಆರ್’ ಚಿತ್ರದಲ್ಲಿ ಜ್ಯೂನಿಯರ್ ಎನ್ಟಿಆರ್, ರಾಮ್ಚರಣ್ ತೇಜ, ಆಲಿಯಾ ಭಟ್, ಅಜಯ್ ದೇವಗನ್, ಶ್ರೇಯಾ ಶರಣ್ ಮುಂತಾದವರು ನಟಿಸುತ್ತಿದ್ದು, ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
ಇದನ್ನೂ ಓದಿ: ನಮ್ಮ ಜತೆ ಇದ್ದ ರವಿ ಬೆಳಗೆರೆನೇ ಬೇರೆ: ಬಿಗ್ಬಾಸ್ ಕ್ಷಣಗಳನ್ನು ನೆನೆದು ಕಣ್ಣೀರಿಟ್ಟ ದೀಪಿಕಾ ದಾಸ್
ಈಗಾಗಲೇ ಹೈದರಾಬಾದ್ನಲ್ಲಿ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈ ವರ್ಷದ ಕೊನೆಯಲ್ಲಿ ಚಿತ್ರೀಕರಣ ಮುಕ್ತಾಯವಾಗಿ, 2021ರ ಜುಲೈನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.