More

    ಪಾಳುಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

    ಕುಂದಾಪುರ: ಕಂದಾವರ ಗ್ರಾಮ ಹೇರಿಕೆರೆ ಬಳಿ ಪಾಳುಬಿದ್ದ ಬಾವಿಗೆ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ರಕ್ಷಿಸಿದ್ದಾರೆ.

    ಹೇರಿಕೆರೆ ಬಳಿ ರಾಜೇಂದ್ರ ಎಂಬುವರ ಮನೆ ಸಮೀಪದ ಬಾವಿಗೆ ಜಿಂಕೆ ಬಿದ್ದಿದ್ದು ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು.

    ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಜಾಗರೂಕತೆಯಿಂದ ಮೇಲಕ್ಕೆತ್ತಿ ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.

    ಉಪವಲಯ ಅರಣ್ಯಾಧಿಕಾರಿ ಉದಯ್, ಚಾಲಕ ಅಶೋಕ್, ಅರಣ್ಯ ವೀಕ್ಷಕ ಸೋಮಶೇಖರ್ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದು ಸ್ಥಳೀಯರು ಸಹಕಾರ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts