blank

ವಲಯ ವಿಂಗಡಣೆಯಲ್ಲಿ ನ್ಯೂನತೆ

jds

ಶಿವಮೊಗ್ಗ: ಸುಗಮ ಆಡಳಿತದ ಹಿತದೃಷ್ಟಿಯಿಂದ ನಗರಪಾಲಿಕೆ ವ್ಯಾಪ್ತಿಯ 35 ವಾರ್ಡ್‌ಗಳನ್ನು 3 ವಲಯಗಳನ್ನಾಗಿ ವಿಭಜಿಸಿರುವುದರಲ್ಲಿ ಬಹಳಷ್ಟು ನ್ಯೂನತೆಗಳಿವೆ. ಇದನ್ನು ಮರು ಪರಿಶೀಲಿಸಿ ಎಲ್ಲಾ ವಾರ್ಡ್‌ಗಳ ಜನರಿಗೂ ಅನುಕೂಲವಾಗುವಂತೆ ವಲಯಗಳನ್ನು ಗುರುತಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಕೋರ್ ಕಮಿಟಿ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್, ನಗರಾಧ್ಯಕ್ಷ ದೀಪಕ್ ಸಿಂಗ್ ನೇತೃತ್ವದಲ್ಲಿ ಜೆಡಿಎಸ್ ಪ್ರಮುಖರು ಬುಧವಾರ ಡಿಸಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.

ವಲಯ ಕಚೇರಿಗಳಿಗೆ ಅವೈಜ್ಞಾನಿಕವಾಗಿ ಜಾಗಗಳನ್ನು ಗುರುತಿಸಲಾಗಿದೆ. ಇದರಿಂದ ನಾಗರಿಕರಿಗೆ ಅನುಕೂಲವಾಗುವ ಬದಲಿಗೆ ಅನಾನುಕೂಲಗಳೇ ಹೆಚ್ಚು. ವಲಯ 1ರ ಕಚೇರಿ ವಿನೋಬನಗರ ಪೊಲೀಸ್ ಚೌಕಿ ಬಳಿಯಿದೆ. ಇದಕ್ಕೆ ಟಿಪ್ಪು ನಗರ, ಸವಾಯಿ ಪಾಳ್ಯ ಹಾಗೂ ವಿದ್ಯಾನಗರ ದಕ್ಷಿಣ ಸೇರಿಸಲಾಗಿದೆ. ಈ ಪ್ರದೇಶಗಳು ಐದಾರು ಕಿ.ಮೀ ದೂರದಲ್ಲಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ವಲಯ 3ರ ವ್ಯಾಪ್ತಿಗೆ ವಿನೋಬನಗರ ದಕ್ಷಿಣ ಹಾಗೂ ಶರಾವತಿ ನಗರ ವಾರ್ಡ್ ಸೇರಿಸಿರುವುದರಿಂದ ನಾಗರಿಕರಿಗೆ ತೊಂದರೆಯಾಗುತ್ತದೆ. ಅಧಿಕಾರ ವಿಕೇಂದ್ರೀಕರಣದಿಂದ ಅನುಕೂಲವಾಗಬೇಕು. ಆದರೆ ಈಗ ವಲಯ ರೂಪಿಸಿರುವುದು ಸಮಸ್ಯೆಗಳು ಹೆಚ್ಚಾಗಲು ಕಾರಣವಾಗಿದೆ ಎಂದು ದೂರಿದರು.
ಜಿಲ್ಲಾ ಜೆಡಿಎಸ್ ಮುಖಂಡರಾದ ಉಮಾಶಂಕರ ಉಪಾಧ್ಯ, ಕೃಷ್ಣ, ವೆಂಕಟೇಶ್, ವಿಜಯಕುಮಾರ್, ನಗರ ಯುವ ಜೆಡಿಎಸ್ ಅಧ್ಯಕ್ಷ ಸಂಜಯ್ ಕಶ್ಯಪ್, ದಯಾನಂದ್, ಮಾಧವಮೂರ್ತಿ, ಸಿದ್ದೇಶ್, ಗೋವಿಂದರಾಜ್, ಗೋಪಿ ಮೊದಲಿಯರ್, ಪುಷ್ಪಾ, ಲಕ್ಷೀ, ಸರಿತಾ ಇತರರಿದ್ದರು.

Share This Article

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…

ಜಗತ್ತಿನ ಈ 5 ಜನರ ಮುಂದೆ ಯಾವಾಗಲೂ ಮೌನವಾಗಿರಬೇಕಂತೆ! ಚಾಣಕ್ಯ ನೀತಿ ಬಗ್ಗೆ ತಿಳಿಯಿರಿ | Chanakya Niti

Chanakya Niti : ಚಾಣಕ್ಯ ಎಂದ ಕ್ಷಣ ಕಣ್ಣ ಮುಂದೆ ಬರುವುದೆ ಚಾಣಕ್ಷ್ಯತನ, ಬುದ್ಧಿವಂತಿಕೆ. ಹಾಗಾಗಿ,…

ಮಾವಿನಹಣ್ಣು ತಿಂದು ಈಸಿಯಾಗಿ ದೇಹದ ತೂಕ ಇಳಿಸಬಹುದು! ಹೊಸ ಅಧ್ಯಯನ.. mango

mango: ತೂಕ ಇಳಿಸಿಕೊಳ್ಳಲು ಬಯಸುವ ಜನರು ಹೆಚ್ಚಾಗಿ ಮಾವಿನಹಣ್ಣನ್ನು ತಪ್ಪಿಸುತ್ತಾರೆ. ಆದರೆ ಇತ್ತೀಚಿನ ಅಧ್ಯಯನವು ತೂಕ…