ನವದೆಹಲಿ: ನಕಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ 80 ಲಕ್ಷ ರೂಪಾಯಿ ಹಣ ಸುಲಿಗೆ ಮಾಡಿರುವ ಆರೋಪದಲ್ಲಿ ದೆಹಲಿ ಮೂಲದ ಮಹಿಳಾ ಯೂಟ್ಯೂಬರ್ನನ್ನು ಗುರುಗ್ರಾಮ ಪೊಲೀಸರು ಬಂಧಿಸಿದ್ದಾರೆ.
ನಮ್ರಾ ಖಾದಿರ್ (22) ಬಂಧಿತ ಆರೋಪಿ. 21 ಉದ್ಯಮಿ ದಿನೇಶ್ ಯಾದವ್ ಎಂಬುವರನ್ನು ಹನಿಟ್ರ್ಯಾಪ್ ಮಾಡಿ, ನಕಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ್ದಳು ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ದೆಹಲಿಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿ, ನಾಲ್ಕು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಖಾದಿರ್, ಪತಿ ಮನೀಶ್ ಅಲಿಯಾಸ್ ವಿರಾಟ್ ಬೆನಿವಾಲ್ ಕೂಡ ಭಾಗಿಯಾಗಿರುವ ಆರೋಪ ಕೇಳಿಬಂದಿದೆ.
ಪೊಲೀಸರ ಮುಂದೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಹಣ ಸೇರಿದಂತೆ ಇತರೆ ವಸ್ತುಗಳನ್ನು ಆಕೆಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶೀಘ್ರದಲ್ಲೇ ಆಕೆಯ ಪತಿಯನ್ನು ಬಂಧಿಸುವುದಾಗಿ ಸೆಕ್ಟರ್ 50 ಪೊಲೀಸ್ ಠಾಣೆಯ ಎಸ್ಎಚ್ಒ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ಬಾದ್ಶಪುರ್ ನಿವಾಸಿಯಾಗಿರುವ ಸಂತ್ರಸ್ತ ಉದ್ಯಮಿ ಯಾದವ್ ಕಳೆದ ಆಗಸ್ಟ್ ತಿಂಗಳಲ್ಲೇ ದೂರು ನೀಡಿದ್ದರು. ಆದರೆ, ಆರೋಪಿ ಮಧ್ಯಂತರ ಜಾಮೀನಿಗಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಳು. ಜಾಮೀನು ಅರ್ಜಿ ರದ್ದಗೊಂಡ ಬಳಿಕ ನವೆಂಬರ್ 26ರಂದು ಸೆಕ್ಟರ್ 50 ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಖಾಸಗಿ ಜಾಹಿರಾತು ಸಂಸ್ಥೆ ನಡೆಸುವ ಯಾದವ್ ಅವರು ನೀಡಿರುವ ದೂರಿನ ಪ್ರಕಾರ ಕೆಲವು ತಿಂಗಳುಗಳ ಹಿಂದೆ ಖಾದಿರ್ ಮತ್ತು ಆಕೆಯ ಪತಿ ಮನೀಶ್ ಪರಿಚಯವಾಯಿತಂತೆ. ಕಂಪನಿಯ ಜಾಹಿರಾತಿಗಾಗಿ ಖಾದಿರ್ಗೆ ಯಾದವ್ 2 ಲಕ್ಷ ರೂ. ಹಣ ನೀಡಿದ್ದರಂತೆ. ಇದಾದ ಬಳಿಕ ತನ್ನನ್ನು ಇಷ್ಟಪಡುತ್ತಿರುವುದಾಗಿ ಮತ್ತು ಮದುವೆ ಆಗಲು ಬಯಸಿರುವುದಾಗಿ ಖಾದಿರ್, ಯಾದವ್ ಬಳಿ ಹೇಳಿಕೊಂಡಳಂತೆ.
ಆಗಸ್ಟ್ನಲ್ಲಿ ಖಾದಿರ್ ಮತ್ತು ಮನೀಶ್ ಜೊತೆ ಕ್ಲಬ್ ಒಂದಕ್ಕೆ ತೆರಳಿದೆ. ಅಲ್ಲದೆ, ಒಂದು ರಾತ್ರಿಗೆ ರೂಮ್ ಬುಕ್ ಮಾಡಿದೆವು. ಆದರೆ, ಮಾರನೇ ದಿನ ನಕಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದಳು. ಬಳಿಕ ನನ್ನಿಂದ 80 ಲಕ್ಷ ರೂ. ಹಣ ಮತ್ತು ಇತರೆ ಉಡುಗೊರೆಗಳನ್ನು ಪಡೆದಳು. ಬಳಿಕ ಎಲ್ಲವನ್ನು ನನ್ನ ತಂದೆಯ ಬಳಿ ಹೇಳಿಕೊಂಡಾಗ ಅವರು ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಯಾದವ್ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾನೆ. (ಏಜೆನ್ಸೀಸ್)
ಕಲಬುರಗಿಯಲ್ಲಿ ಭೀಕರ ಅಪಘಾತ: ಸರ್ಕಲ್ ಇನ್ಸ್ಪೆಕ್ಟರ್ ರವಿ ಉಕ್ಕುಂದ, ಪತ್ನಿ ದುರ್ಮರಣ
ಡ್ರಗ್ಸ್ ವಿರುದ್ಧ ಹೋರಾಡ್ತಿದ್ದ ಯುವ ನಾಯಕನ ಕರಾಳ ಮುಖ ಬಯಲು: ಮೊಬೈಲ್ನಲ್ಲಿತ್ತು 30 ಮಹಿಳೆಯರ ವಿಡಿಯೋ!
ಹೋದ ಸಂದರ್ಶನದಲ್ಲಿ ಏಟು ತಿಂದಿದ್ದ ಕೆನ್ನೆಗೆ ಈ ಬಾರಿ ಸಿಹಿ ಮುತ್ತು! ಆಶು ರೆಡ್ಡಿ ಪಾದಕ್ಕೆ ಆರ್ಜಿವಿ ಕಿಸ್