ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕು ವಿಪರೀತ ಪ್ರಸರಣವಾಗುತ್ತಿದೆ. ಕಳೆದ ಒಂದು ವಾರದಿಂದ ಪ್ರತಿದಿನ 1000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.
ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಲ್ಲಿ ಕೊವಿಡ್-19 ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರು ನಾಳೆ (ಮಂಗಳವಾರ) ಮುಂಜಾನೆ ಟೆಸ್ಟ್ಗೆ ಒಳಗಾಗಲಿದ್ದಾರೆ.
ಇದನ್ನೂ ಓದಿ: ಚಿರಂಜೀವಿ ಅಗಲಿಕೆಗೆ ‘ಚಿರು’ ಚಿತ್ರದ ನಾಯಕಿ ಕೃತಿ ಖರಬಂದ ಭಾವುಕ ನುಡಿ!
ಭಾನುವಾರ ಮಧ್ಯಾಹ್ನದಿಂದ ಅವರಲ್ಲಿ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, ಆಗಿನಿಂದಲೇ ಸೆಲ್ಫ್ ಐಸೋಲೇಟ್ ಆಗಿದ್ದಾರೆ. ತಾವು ನಡೆಸಬೇಕಿದ್ದ ಎಲ್ಲ ಸಭೆಗಳನ್ನೂ ರದ್ದುಗೊಳಿಸಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕೆಮ್ಮು ಮತ್ತು ಮಧುಮೇಹದ ಸಮಸ್ಯೆಯಿದೆ. ಇದೀಗ ಗಂಟಲು ನೋವು ಸಹಿತ ಜ್ವರಕ್ಕೆ ತುತ್ತಾಗಿರುವ ಅರವಿಂದ್ ಕೇಜ್ರಿವಾಲ್ಗೆ ಒಂದು ದಿನ ಕಾದು, ನಂತರ ತಪಾಸಣೆಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡಿದ್ದರಿಂದ ಸೆಲ್ಫ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಇದನ್ನೂ ಓದಿ: ಅಮೆರಿಕ ಪ್ರತಿಭಟನೆಯಿಂದ ಹೊತ್ತಿ ಉರಿದ ಬಳಿಕ ಈ ಯುವಕನಿಗೆ ಗಿಫ್ಟ್ಗಳ ಸುರಿಮಳೆ!