ಅತ್ಯಾಚಾರಕ್ಕೊಳಗಾಗಿ, ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕಿಗೆ ಸಿಎಂ ಭೇಟಿ

ನವದೆಹಲಿ: ದುರುಳನೊಬ್ಬ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ತಲೆಗೆ ಕತ್ತರಿಯಿಂದ ಇರಿದು ಪರಾರಿಯಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಮಂಗಳವಾರ ಇಲ್ಲಿಯ ಪೀರಾ ಗಾರ್ಹಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಹೊರಳಾಡುತ್ತಿದ್ದ ಆಕೆಯನ್ನು ದಾರಿಹೋಕರು ಗಮನಿಸಿದಾಗ ಇದು ಬೆಳಕಿಗೆ ಬಂದಿದೆ. ಚಿಕಿತ್ಸೆಗಾಗಿ ಆಕೆಯನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತೀವ್ರ ಬೇಸರ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಾಲಕಿಯನ್ನು ಭೇಟಿಯಾಗಲು ಏಮ್ಸ್ ಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: … Continue reading ಅತ್ಯಾಚಾರಕ್ಕೊಳಗಾಗಿ, ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕಿಗೆ ಸಿಎಂ ಭೇಟಿ