More

    ಡಿಕೆಶಿಗೆ ಮತ್ತಷ್ಟು ಸಂಕಷ್ಟ: ದೆಹಲಿ ಕೋರ್ಟ್​​ನಿಂದ ಸಮನ್ಸ್​ ಜಾರಿ

    ನವದೆಹಲಿ: ಇತ್ತೀಚೆಗೆ ಜಾರಿ ನಿರ್ದೇಶನಾಲಯದಿಂದ ಆರೋಪ ಪಟ್ಟಿ ಸಲ್ಲಿಸಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 

    ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ. 

    ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಸಮನ್ಸ್​ ಜಾರಿ ಮಾಡಿದ್ದು, ಜುಲೈ 1 ರಂದು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ. ಇನ್ನು ಡಿಕೆಶಿ ಸೇರಿದಂತೆ ಐವರಿಗೂ ನೊಟೀಸ್​ ಜಾರಿಯಾಗಿದೆ.

    ನಿರಂತರ ಆದಾಯ ಹೆಚ್ಚಳ ಹಾಗೂ ಆಸ್ತಿಗೆ ಸಂಬಂಧಿಸಿದಂತೆ ಇವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಇತ್ತೀಚೆಗೆ ಜಾರಿ ನಿರ್ದೇಶನಾಲಯ ಆರೋಪ ಪಟ್ಟಿ ಸಲ್ಲಿಸಿತ್ತು.

    ಡಿಕೆಶಿಗೆ ಮತ್ತೆ ಎದುರಾಯ್ತು ಸಂಕಷ್ಟ! ಚಾರ್ಜ್​ಶೀಟ್​ ಸಲ್ಲಿಸಿದ ಇಡಿ

    ಡಿ.ಕೆ.ಶಿವಕುಮಾರ್​ ಎದುರು ಸವಾಲಿನ ಹಾದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts