ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸೆರೆವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಜಾಮೀನು ಮಂಜೂರು ಮಾಡಿದೆ.

ತಮ್ಮ ಬಂಧನ ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ತನಿಖೆಯ ಉದ್ದೇಶಕ್ಕಾಗಿ ಈಗಾಗಲೇ ಮತ್ತೊಂದು ಪ್ರಕರಣದಲ್ಲಿ ಬಂಧನದಲ್ಲಿರುವ ವ್ಯಕ್ತಿಯನ್ನು ಬಂಧಿಸಲು ಯಾವುದೇ ಅಡ್ಡಿಯಿಲ್ಲ ಎಂದು ನ್ಯಾಯಪೀಠ ಹೇಳಿದೆ.
#WATCH | Delhi: Supreme Court grants bail to Delhi CM Arvind Kejriwal in a corruption case registered by CBI in the alleged excise policy scam.
— ANI (@ANI) September 13, 2024
Delhi Minister Saurabh Bharadwaj says, "Today's newspapers say that around 40 people were made accused and only 2 people remained in… pic.twitter.com/LMzwX8x3Zm
ಇದನ್ನೂ ಓದಿ: ಸಾಯುವ ಮೊದಲು ಮಕ್ಕಳಿಗೆ ಕರೆ ಮಾಡಿದ್ದ ಮಲೈಕಾ ತಂದೆ; ತನಿಖೆಯಲ್ಲಿ ಬೆಳಕಿಗೆ ಬಂತು ಆಘಾತಕಾರಿ ಅಂಶ
ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡದಂತೆ ಕೇಜ್ರಿವಾಲ್ಗೆ ತಾಕೀತು ಮಾಡಿರುವ ನ್ಯಾಯಾಲಯ ಜಾರಿ ನಿರ್ದೇಶನಾಲಯದ ವಿಷಯದಲ್ಲಿ ವಿಧಿಸಲಾದ ಷರತ್ತುಗಳು ಈ ಪ್ರಕರಣಕ್ಕೂ ಅನ್ವಯಿಸುತ್ತವೆ ಎಂದು ಹೇಳಿ ಜಾಮೀನು ಮಂಜೂರು ಮಾಡಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್ನಲ್ಲಿ ಸಿಬಿಐ ಅವರು ಬಂಧಿಸಿತ್ತು. ಈಗಾಗಲೇ ಜಾರಿ ನಿರ್ದೇಶನಾಲಯವು ಸಲ್ಲಿಸಿದ ಪ್ರಕರಣದಲ್ಲಿ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ ಅವರು ಈಗ ಜೈಲಿನಿಂದ ಹೊರಬರಲಿದ್ದಾರೆ. ಸುಮಾರು ಆರು ತಿಂಗಳ ಜೈಲುವಾಸದ ನಂತರ ಅವರು ಬಿಡುಗಡೆಯಾಗಲಿದ್ದ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಸಂಬ್ರಮ ಮನೆ ಮಾಡಿದೆ.