More

    ಎಲ್ಲರನ್ನೂ ಆಕ್ಸಿಜನ್ ಕೇಳುತ್ತಿರುವ ದೆಹಲಿ ಸರ್ಕಾರ ಮಂಜೂರಾದ ಪ್ಲ್ಯಾಂಟ್​ಗಳನ್ನು ಇನ್ನೂ ಸ್ಥಾಪಿಸಿಲ್ಲ !

    ನವದೆಹಲಿ : ಹೆಚ್ಚುತ್ತಿರುವ ಕರೊನಾ ರೋಗಿಗಳಿಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್​ಅನ್ನು ಪಡೆಯಲು ದೆಹಲಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿಯ ಮೇಲೆ ಮನವಿ ಮಾಡುತ್ತಿದೆ. ದೆಹಲಿಯ ಹಲವು ಆಸ್ಪತ್ರೆಗಳು ಆಕ್ಸಿಜನ್ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿವೆ. ಇದೀಗ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಎಲ್ಲಾ ರಾಜ್ಯಗಳಿಗೂ ಪತ್ರ ಬರೆದು ದೇಶದ ರಾಜಧಾನಿಯ ಜನರಿಗೆ ಆಕ್ಸಿಜನ್ ಒದಗಿಸಲು ಸಹಾಯ ಕೋರಿದ್ದಾರೆ.

    ಇಷ್ಟೆಲ್ಲದರ ನಡುವೆ ದೆಹಲಿ ಸರ್ಕಾರ ದೆಹಲಿಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಏಕೆ ಸ್ಥಾಪಿಸಿಲ್ಲ ಎಂಬ ಪ್ರಶ್ನೆ ಮೂಡಿ ಬಂದಿದೆ. ಪಿಎಂ-ಕೇರ್ಸ್ ಫಂಡ್​ ಅಡಿಯಲ್ಲಿ ಕಳೆದ ವರ್ಷ 8 ಆಕ್ಸಿಜನ್ ಪ್ಲ್ಯಾಂಟ್​​ಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದರೂ, ಆಕ್ಸಿಜನ್ ಪ್ಲ್ಯಾಂಟ್​​ಗಳನ್ನು ಸ್ಥಾಪಿಸಲು ದೆಹಲಿ ಸರ್ಕಾರ ವಿಫಲವಾಗಿದೆ. ಆದ್ದರಿಂದ ದೆಹಲಿಯ ಆಸ್ಪತ್ರೆಗಳಲ್ಲಿ ಕರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಉಂಟಾಗುತ್ತಿರುವ ತೊಂದರೆಗೆ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಕಾರಣವಾಗಿದೆ ಎಂದು ಬಿಜೆಪಿ ಹೇಳಿದೆ.

    ಇದನ್ನೂ ಓದಿ: ಸರ್ಕಾರದಿಂದ ಆಕ್ಸಿಜನ್​ ಪೂರೈಕೆಯಲ್ಲಿ ವಿಳಂಬ; ಒಂದೇ ಆಸ್ಪತ್ರೆಯಲ್ಲಿ 25 ರೋಗಿಗಳ ಸಾವು

    “2020 ರ ಡಿಸೆಂಬರ್​ನಲ್ಲಿ ಕೇಂದ್ರ ಸರ್ಕಾರವು ದೆಹಲಿ ಸರ್ಕಾರಕ್ಕೆ 8 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಹಣ ಮಂಜೂರು ಮಾಡಿತ್ತು. ಆದರೆ ಈವರೆಗೆ ಸರ್ಕಾರ ಒಂದು ಘಟಕವನ್ನಷ್ಟೇ ಆರಂಭಿಸಿದೆ. ದೆಹಲಿ ಸರ್ಕಾರಕ್ಕೆ ಕೆಲಸ ಮಾಡುವ ಉದ್ದೇಶ ಇಲ್ಲದಿರುವುದರಿಂದ ದೆಹಲಿಯ ಜನರು ಇಂದು ನರಳಬೇಕಾಗುತ್ತಿದೆ” ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತ ಹೇಳಿದ್ದಾರೆ.

    ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸರ್ಕಾರದ ಮೇಲೆ ಕ್ರಿಮಿನಲ್ ನಿರ್ಲಕ್ಷ್ಯದ ಕೇಸು ದಾಖಲಿಸಬೇಕು. ನಗರದಲ್ಲಿ ಆಕ್ಸಿಜನ್ ಪ್ಲ್ಯಾಂಟ್​ಗಳನ್ನು ಸ್ಥಾಪಿಸದಿರುವುದಕ್ಕೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. “ದೆಹಲಿಯಲ್ಲಿ ಉಂಟಾಗಿರುವ ಆಕ್ಸಿಜನ್ ಸಮಸ್ಯೆಗೆ ದೆಹಲಿ ಸರ್ಕಾರವೇ ಕಾರಣ. ದೆಹಲಿಯಲ್ಲಿ ಯಾಕೆ ಆಕ್ಸಿಜನ್ ಘಟಕವನ್ನು ಸ್ಥಾಪಿಸಿಲ್ಲ ಎಂದು ದೆಹಲಿ ಹೈಕೋರ್ಟ್​ ಕೂಡ ಸರ್ಕಾರವನ್ನು ಪ್ರಶ್ನಿಸಿತು. ಆದರೆ ಅದಕ್ಕೆ ಸರ್ಕಾರದ ಬಳಿ ಯಾವುದೇ ಉತ್ತರ ಇರಲಿಲ್ಲ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

    ಇದನ್ನೂ ಓದಿ: ತನ್ನ ಉದ್ಯೋಗಿಗಳಿಗೆ ಹಾಗೂ ಅವರ ಕುಟುಂಬದವರಿಗೆ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ ಇನ್ಪೋಸಿಸ್

    ಬಿಜೆಪಿ ನಾಯಕ ಹಾಗೂ ಅಸ್ಸಾಂ ಆರೋಗ್ಯ ಸಚಿವರಾದ ಹಿಮಂತ ಬಿಸ್ವ ಸರ್ಮ ಅವರು, “ಕರೊನಾ ಸಮಸ್ಯೆ ಎದುರಾದ ಮೇಲೆ ಅಸ್ಸಾಂ 8 ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಿದ್ದು, ಇನ್ನೂ ಐದು ಘಟಕಗಳ ಕೆಲಸ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ದೆಹಲಿಗೆ 8 ಘಟಕಗಳಿಗಾಗಿ ಡಿಸೆಂಬರ್ 2020 ರಲ್ಲೇ ಹಣ ನೀಡಿದ್ದಾರೆ. ಆದರೆ ಎಂಟರಲ್ಲಿ ಒಂದೇ ಘಟಕವನ್ನು ಸ್ಥಾಪಿಸಲಾಗಿದೆ. ನಿಮ್ಮ ಸರ್ಕಾರ ವಿಫಲವಾಗಿರುವಾಗ ಮೋದಿ ಅವರನ್ನು ಏಕೆ ದೂಷಿಸುತ್ತೀರಾ ?” ಎಂದು ಕೇಜ್ರಿವಾಲ್​ರನ್ನು ಪ್ರಶ್ನಿಸಿದ್ದಾರೆ. (ಏಜೆನ್ಸೀಸ್)

    ಕರೊನಾ ಲಸಿಕೆ, ಆಮ್ಲಜನಕ ಉಪಕರಣ : ಆಮದು ಶುಲ್ಕ ವಿನಾಯಿತಿ

    ಆಕ್ಸಿಜನ್ ಕೊರತೆ : ಖಾಸಗಿ ಆಸ್ಪತ್ರೆಯಲ್ಲಿ 6 ರೋಗಿಗಳ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts