More

    ಈಶಾನ್ಯ ದೆಹಲಿ ಹಿಂಸಾಚಾರ; ಕುಮ್ಮಕ್ಕು ನೀಡಿದ ಆರೋಪದಡಿ ಪಿಎಫ್​ಐ ಅಧ್ಯಕ್ಷ ಫರ್ವೇಜ್​, ಕಾರ್ಯದರ್ಶಿ ಇಲಿಯಾಸ್​ ಅರೆಸ್ಟ್​

    ನವದೆಹಲಿ: ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪದಡಿ ಪಾಪ್ಯುಲರ್​ ಫ್ರಂಟ್ ಆಫ್​ ಇಂಡಿಯಾದ (ಪಿಎಫ್​ಐ) ಅಧ್ಯಕ್ಷ ಫರ್ವೇಜ್​ ಅಹಮದ್ ಮತ್ತು ಕಾರ್ಯದರ್ಶಿ ಮಹಮ್ಮದ್​ ಇಲಿಯಾಸ್​ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

    ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ಸಂಘರ್ಷ ಏರ್ಪಟ್ಟು, ಅದು ಹಿಂಸಾಚಾರವಾಗಿ ಮಾರ್ಪಟ್ಟಿತ್ತು. ಸುಮಾರು 53 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸರು 712 ಮಂದಿಯ ವಿರುದ್ಧ ಎಫ್​ಐಆರ್​ ದಾಖಲಿಸಿ, 200 ಜನರನ್ನು ಬಂಧಿಸಿದ್ದರು.

    ಹಿಂಸಾಚಾರದಲ್ಲಿ ದಂಗೆಕೋರರನ್ನು ಪ್ರಚೋದಿಸುವ ಕೆಲಸವನ್ನು ಇವರಿಬ್ಬರೂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹಾಗೇ ಈ ವೇಳೆ ಪ್ರತಿಭಟನಾಕಾರರಿಗೆ ಧನಸಹಾಯವನ್ನೂ ಮಾಡಿದ್ದಾರೆ. ಹಾಗಾಗಿ ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
    ಫರ್ವೇಜ್ ಮತ್ತು ಇಲಿಯಾಸ್​ನನ್ನು ದೆಹಲಿಯ ಪಟಿಯಾಲಾ ಕೋರ್ಟ್​ಗೆ ಹಾಜರುಪಡಿಸಲಾಗುವುದು ಎಂದಿದ್ದಾರೆ.(ಏಜೆನ್ಸೀಸ್​)

    ಶರಣಾಗುತ್ತೇನೆ ಎಂದು ಬಂದ ಆಪ್​ ಉಚ್ಚಾಟಿತ ಕೌನ್ಸಿಲರ್​ ತಾಹೀರ್​ ಹುಸೇನ್​ ಮನವಿಯನ್ನು ತಿರಸ್ಕರಿಸಿದ ಕೋರ್ಟ್​; ಮುಂದೇನಾಯ್ತು ಗೊತ್ತಾ?

    ‘ನಾನು ನನ್ನ ಸ್ನೇಹಿತ ನರೇಂದ್ರ ಮೋದಿಯವರೊಂದಿಗೆ ಕರೊನಾ ವೈರಸ್​ನಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ’: ಇಸ್ರೇಲ್​ ಪ್ರಧಾನಿ ಬೆಂಜಮಿನ್​ ನೇತನ್ಯಾಹು

    ತಮಿಳುನಾಡಿನ ಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರಾ ತಲೈವಾ? ರಾಜಕೀಯಕ್ಕೆ ಇಳಿಯುವುದನ್ನು ದೃಢಪಡಿಸಿದ ನಟ ರಜನೀಕಾಂತ್ ನಿಲುವು ಹೀಗಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts