More

    ಗ್ಯಾರಂಟಿ ಸಾಧನೆಗಳನ್ನು ಜನರಿಗೆ ತಲುಪಿಸಿ

    ದೇವರಹಿಪ್ಪರಗಿ: ದೇಶದಲ್ಲಿ ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಏಕೈಕ ರಾಜ್ಯ ಕರ್ನಾಟಕ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜು ಆಲಗೂರ ಹೇಳಿದರು.

    ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಜರುಗಿದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಜಾಗೃತಿ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಪೂರ್ವದಲ್ಲಿ ನುಡಿದಂತೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದು ಅನುಷ್ಠಾನಗೊಳಿಸಿದ್ದಾರೆ. ಇದನ್ನು ಲೋಕಸಭೆ ಚುನಾವಣೆಗೆ ಮುನ್ನ ಪ್ರತಿ ಮನೆಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದರು.

    ಮಾಜಿ ಶಾಸಕ ಶರಣಪ್ಪ ಸುಣಗಾರ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸರಿತಾ ನಾಯಿಕ್, ಮಡಿವಾಳಪ್ಪ ಬ್ಯಾಲ್ಯಾಳ, ಜಹಾಂಗೀರ ಶಿರಸಗಿ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದರು. ಪರಶುರಾಮ ದಿಂಡವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

    ರಾಜ್ಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಸಂತೋಷ ದೊಡಮನಿ, ಅಶೋಕ ಚಲವಾದಿ, ಸಿ.ಎಸ್. ನ್ಯಾಮಣ್ಣವರ(ಯಾಳವಾರ), ಮೈನೂದ್ಧಿನ ಬಾಗವಾನ(ಹುಣಶ್ಯಾಳ), ರಮೇಶ ಗುಬ್ಬೇವಾಡ, ಹುಯೋಗಿ ತಳ್ಳೋಳ್ಳಿ, ಲಾಳೇಮಶಾಕ್ ರೂಗಿ, ದಾವುಲಸಾಬ್ ನಾಯ್ಕೋಡಿ, ವಿಠ್ಠಲ ದೇಗಿನಾಳ, ಪ್ರಕಾಶ ಗುಡಿಮನಿ, ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯರಾದ ರಾಜು ಮೆಟಗಾರ, ಸುನೀಲ ಕನಮಡಿ, ಹುಸೇನ ಕೊಕಟನೂರ, ಸುನಂದಾ ಸೊನ್ನಳ್ಳಿ, ರಾವುತಮಾಸ್ತರ ತಳಕೇರಿ, ಬಸವರಾಜ ಇಂಗಳಗಿ ಇತರರಿದ್ದರು.

    ಹಲವು ನಾಯಕರ ಗೈರು: ದೇವರಹಿಪ್ಪರಗಿ ಹಾಗೂ ಹೂವಿನಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಶೀರ್‌ಅಹ್ಮದ್ ಬೇಪಾರಿ, ಬಿ.ಎಸ್. ಪಾಟೀಲ(ಸಾತಿಹಾಳ), ಹೂವಿನಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ರಮೀಜಾ ನದಾಫ್, ಬಿ.ಎಸ್. ಪಾಟೀಲ (ಯಾಳಗಿ), ಸುಭಾಸ ಛಾಯಾಗೋಳ, ಪ್ರಭುಗೌಡ ಬಿ.ಎಲ್.(ಚಬನೂರ), ಗೌರಮ್ಮ ಮುತ್ತಗಿ, ಸುಜಾತಾ ಕಳ್ಳಿಮನಿ, ಜಿಪಂ ಮಾಜಿ ಉಪಾಧ್ಯಕ್ಷ ನಿಂಗನಗೌಡ ಪಾಟೀಲ(ಯರನಾಳ) ಹಾಗೂ ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾಯಿತ ಕಾಂಗ್ರೆಸ್ ಸದಸ್ಯರು ಹಾಗೂ ಮತಕ್ಷೇತ್ರದ ಪ್ರಮುಖ ನಾಯಕರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಇದು ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಎತ್ತಿ ತೋರಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts