ಜಯಂತಿ ಆಚರಿಸದವರ ವಿರುದ್ಧ ಕ್ರಮಕ್ಕೆ ಆಗ್ರಹ

blank

ಯರಗಟ್ಟಿ: ಇಲ್ಲಿನ ಪಟ್ಟಣ ಪಂಚಾಯತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲು ಅಧಿಕಾರಿ, ಸಿಬ್ಬಂದಿ ನಿರಾಕರಿಸಿದ್ದಾರೆ ಎಂದು ಆರೋಪಿಸಿ ಶನಿವಾರ ಪಪಂ ಮುಂಭಾಗದಲ್ಲಿ ರೆಡ್ಡಿ ಸಮುದಾಯದ ಜನ ಅಹೋರಾತ್ರಿ ಧರಣಿ ನಡೆಸಿದ ಟನೆ ನಡೆಯಿತು. ಸರ್ಕಾರದ ಎಲ್ಲ ಕಚೇರಿ, ಶಾಲಾ&ಕಾಲೇಜುಗಳಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಮಾಡುವಂತೆ ರಾಜ್ಯ ಸರ್ಕಾರವು ನಿರ್ದೇಶನ ನೀಡಿದೆ. ಆದರೆ, ಯರಗಟ್ಟಿ ಪಪಂ ಅಧಿಕಾರಿ, ಸಿಬ್ಬಂದಿ ಉದ್ದೇಶಪೂರ್ವಕವಾಗಿ ಜಯಂತಿ ಆಚರಣೆ ಮಾಡಿಲ್ಲ. ಈ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು ಎಂದು ಆಗ್ರಹಿಸಿದರು. ಪ.ಪಂ ನಾಮ ನಿರ್ದೇಶನ ಸದಸ್ಯ ನಿಖಿಲ ಪಾಟೀಲ, ವೆಂಕಟೇಶ ದೇವರಡ್ಡಿ, ವಿಶಾಲಗೌಡ ಪಾಟೀಲ, ಯಲ್ಲಪ್ಪಗೌಡ ಪಾಟೀಲ, ಗಿರೀಶ ಪಾಟೀಲ, ಗೋವಿಂದ ದೇವರಡ್ಡಿ, ನಾರಾಯಣ ಪಾಟೀಲ, ಸದಾನಂದ ಪಾಟೀಲ, ರಮೇಶ ಪಾಟೀಲ, ಕಿಟ್ಟು ತೊರಗಲ್​, ಸಂತೋಷ ದೇವರಡ್ಡಿ, ಗಿರೀಶ ದೇವರಡ್ಡಿ ಇತರರಿದ್ದರು.

blank
Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank