More

    ಸೇವೆ ನಿರಾಕರಿಸಿದರೆ ಪರವಾನಗಿ ರದ್ದು

    ಯಾದಗಿರಿ: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳು ಸೇವೆ ನೀಡಲು ನಿರಾಕರಿಸಿದರೆ ಅವುಗಳ ಪರವಾನಗಿ ರದ್ದುಗೊಳಿಸುವಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

    ಭಾನುವಾರ ಇಲ್ಲಿನ ಜಿಪಂ ಕಚೇರಿ ಸಭಾಂಗಣದಲ್ಲಿ ಕರೊನಾ ಸಾಂಕ್ರಾಮಿಕ ರೋಗ ಹರಡದಂತೆ ಕೈಗೊಂಡ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಣೆಗೆ ನಿರಾಕರಿಸಿದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

    ಶಾಸಕ ನರಸಿಂಹ ನಾಯಕ ಮಾತನಾಡಿ, ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳು ತೆರೆಯುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟಾಗುತ್ತಿದೆ ಎಂದು ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಗೃಹ ಸಚಿವಾಲಯದ ಆದೇಶದಂತೆ ಖಾಸಗಿ ಆಸ್ಪತ್ರೆಗಳು ತುರ್ತು ಸೇವೆಯಡಿಯಲ್ಲಿ ಬರುತ್ತವೆ. ಖಾಸಗಿ ವೈದ್ಯರು ಸೇವೆ ನೀಡದಿದ್ದರೆ ಸರ್ಕಾರಿ ವೈದ್ಯರ ಮೇಲೆ ಒತ್ತಡ ಹೆಚ್ಚುತ್ತದೆ. ಆದ್ದರಿಂದ ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸುವಂತೆ ನಿರ್ದೇಶನ ನೀಡಿದರು.

    ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್, ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳ ಪಟ್ಟಿ ಮಾಡಿ ಪ್ರತಿದಿನ ಕಾರ್ಯನಿರ್ವಹಿಸುವಂತೆ ಸೂಚಿಸಬೇಕು. ಇಲ್ಲವಾದಲ್ಲಿ ಕ್ರಮ ಜರುಗಿಸಿ ಎಂದು ಸಲಹೆ ನೀಡಿದರು.

    ವೈಯಕ್ತಿಕ ರಕ್ಷಣಾ ಸಾಧನಾ (ಪಿಪಿಇ), ಮಾಸ್ಕ್ ಸೇರಿದಂತೆ ಜಿಲ್ಲೆಯಲ್ಲಿ ವೈದ್ಯಕೀಯ ಸಾಮಗ್ರಿಗಳ ಕೊರತೆ ಇದೆ. ವೈರಸ್ ಹರಡದಂತೆ ಪರಿಣಾಮಕಾರಿ ತಡೆಗೆ ಇವುಗಳ ಪೂರೈಕೆ ಅತ್ಯಗತ್ಯ ಎಂದು ಶಾಸಕ ರಾಜುಗೌಡ ಅವರು ಮನವಿ ಮಾಡಿ, ಸುರಪುರದ ರಂಗಂಪೇಟೆಯಲ್ಲಿ ದಿನಕ್ಕೆ 20 ಸಾವಿರಕ್ಕಿಂತ ಹೆಚ್ಚು ಮಾಸ್ಕ್ ತಯಾರಿಸುವವರಿದ್ದಾರೆ ಎಂಬುದಾಗಿ ಸಭೆಯ ಗಮನಕ್ಕೆ ತಂದರು. ದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮಾಸ್ಕ್ಗಳ ಪೂರೈಸುವ ಸ್ವಸಹಾಯ ಸಂಘಗಳಿದ್ದರೆ ಅವರಿಗೆ ಮಾಸ್ಕ್ ತಯಾರಿಸಲು ಅನುಮತಿ ಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.

    ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಿಂದ ಕರೊನಾ ಪರೀಕ್ಷೆಗೆ ಕಳುಹಿಸಿದ್ದ ಒಟ್ಟು 16 ವ್ಯಕ್ತಿಗಳ ಮಾದರಿಗಳು ನೆಗೆಟಿವ್ ಬಂದಿವೆ. ಈ ಪೈಕಿ ನಿಜಾಮುದ್ದೀನ್ ತಬ್ಲಿಘಿ ಮಾಕರ್ಾಜ್ ಸಭೆಯಲ್ಲಿ ಭಾಗವಹಿಸಿ ಯಾದಗಿರಿ ಜಿಲ್ಲೆಗೆ ವಾಪಸ್ಸಾಗಿರುವ 5 ವ್ಯಕ್ತಿಗಳ ಮಾದರಿಗಳು ನೆಗೆಟಿವ್ ಬಂದರೂ ನಿರ್ದೇಶನದಂತೆ ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿದೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

    ಸಭೆಗೂ ಮುನ್ನ ಸಚಿವರು ನಗರದ ಹೊರ ವಲಯದಲ್ಲಿನ ಹೊಸ ಜಿಲ್ಲಾಸ್ಪತ್ರೆಯಲ್ಲಿ ಆರಂಭಿಸಿರುವ ಕರೊನಾ ಆಸ್ಪತ್ರೆಯನ್ನು ಪರಿಶೀಲಿಸಿದರು. ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಶಾಸಕ ವೆಂಕಟರೆಡ್ಡಿ ಮುದ್ನಾಳ್, ನಾಗನಗೌಡ ಕಂದಕೂರ, ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಜಿಲ್ಲೆಯ ಮೇಲುಸ್ತುವಾರಿ ಎ.ಬಿ.ಇಬ್ರಾಹಿಂ, ಜಿಪಂ ಸಿಇಒ ಶಿಲ್ಪಾ ಶಮರ್ಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts