More

    ಏಮ್ಸ್ ಮಂಜೂರು ಮಾಡಲು ಒತ್ತಾಯ

    ದೇವದುರ್ಗ: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ರಾಯಚೂರುಗೆ ಏಮ್ಸ್ ಸಂಸ್ಥೆ ಮಂಜೂರು ಮಾಡುವಂತೆ ಒತ್ತಾಯಿಸಿ ಶಿರಸ್ತೇದಾರ್ ಗೋವಿಂದ್‌ಗೆ ಆಟೋ ವಾಹನ ಚಾಲಕರ ಒಕ್ಕೂಟ ಬುಧವಾರ ಮನವಿ ಸಲ್ಲಿಸಿತು.

    ಕಲ್ಯಾಣ ಕರ್ನಾಟಕದ ಅತ್ಯಂತ ಹಿಂದುಳಿದ ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರಾತಿ ಮಾಡುವಂತೆ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಧರಣಿ 321ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಿರುವುದು ಖಂಡನೀಯ. ಈ ಜಿಲ್ಲೆಯಲ್ಲಿ ಗುಣಮಟ್ಟದ ಆಸ್ಪತ್ರೆ ಹಾಗೂ ಸುಸಜ್ಜಿತ ಶಿಕ್ಷಣ ಸಂಸ್ಥೆಗಳಿಲ್ಲ. ಏಮ್ಸ್ ಮಂಜೂರು ಮಾಡಿದರೆ ಇಲ್ಲಿನ ಜನರಿಗೆ ಉತ್ತಮ ಆರೋಗ್ಯ, ಶಿಕ್ಷಣ ಜತೆಗೆ ಉದ್ಯೋಗಾವಕಾಶಗಳು ಸಿಗಲಿವೆ ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರ ರಾಯಚೂರಿಗೆ ಏಮ್ಸ್ ಸಂಸ್ಥೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts