More

    ಸುಳ್ಳು ಆಶ್ವಾಸನೆ ಇನ್ನು ಸಾಕು

    ದೇವದುರ್ಗ: ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಹಿಂದುಳಿದ ರಾಯಚೂರಿಗೆ ಕೇಂದ್ರ ಸರ್ಕಾರ ಏಮ್ಸ್ ಮಂಜೂರು ಮಾಡಬೇಕೆಂದು ಆಗ್ರಹಿಸಿ ಪಟ್ಟಣದ ಮಿನಿವಿಧಾನಸೌಧದ ಮುಂದೆ ಏಮ್ಸ್ ಹೋರಾಟ ಸಮಿತಿ ಮಂಗಳವಾರ ಪ್ರತಿಭಟನೆ ನಡೆಸಿತು. ಸುಳ್ಳು ಆಶ್ವಾಸನೆ ಸಾಕು ಏಮ್ಸ್ ಬೇಕು ಎನ್ನುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

    ಕಸಾಪ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿ ಅತ್ಯಂತ ಹಿಂದುಳಿದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ನಡೆಯುತ್ತಿರುವ ಹೋರಾಟ 250 ದಿನ ಪೂರೈಸಿದೆ. ಆದರೂ, ಸರ್ಕಾರ ಈ ಬಗ್ಗೆ ನಿರ್ಲಕ್ಷೃ ವಹಿಸಿದ್ದು, ಕಲ್ಯಾಣ ಕರ್ನಾಟಕ ಭಾಗವನ್ನು ಜನಪ್ರತಿನಿಧಿಗಳು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಜಿಲ್ಲೆಯ ಶಾಸಕರು, ಸಂಸದರು, ಉಸ್ತುವಾರಿ ಸಚಿವ, ಸಿಎಂ ಬಸವರಾಜ ಬೊಮ್ಮಾಯಿ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಸುಳ್ಳು ಆಶ್ವಾಸನೆ ನೀಡಿದ್ದಾರೆ. ಪಕ್ಷಾತೀತವಾಗಿ ನಡೆದಿರುವ ಹೋರಾಟವನ್ನು ರಾಜಕೀಯ ಪಕ್ಷಗಳು ಸಂಪೂರ್ಣ ಕಡೆಗಣಿಸಿವೆ ಎಂದು ಆರೋಪಿಸಿದರು.

    ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಫೆ.1ರಂದು ಕೇಂದ್ರ ಸರ್ಕಾರ ಮಂಡಿಸಲಿರುವ ಬಜೆಟ್‌ನಲ್ಲಿ ಜಿಲ್ಲೆಗೆ ಏಮ್ಸ್ ನೀಡುವ ಬಗ್ಗೆ ಘೋಷಣೆ ಮಾಡಬೇಕು ಎಂದು ಅಳ್ಳುಂಡಿ ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts