ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ರಾಷ್ಟ್ರರಾಜಕೀಯ ಅಖಾಡಕ್ಕಿಳಿಯಲು ಮತ್ತೊಮ್ಮೆ ರೆಡಿಯಾಗಿದ್ದಾರೆ.
ರಾಜ್ಯಸಭೆ ಮೂಲಕ ಸಂಸತ್ತು ಪ್ರವೇಶಿಸಲು ಹಸಿರು ನಿಶಾನೆ ನೀಡಿದ್ದು, ಮೇಲ್ಮನೆ ಮೇಲಾಟಕ್ಕೆ ಮತ್ತೆ ತೆರೆಮರೆಯಲ್ಲಿ ಹಳೇ ದೋಸ್ತಿಗಳ ರಾಜಕೀಯ ಶುರುವಾಗಲಿದೆ.
ಇದನ್ನೂ ಓದಿರಿ ಕೋಳಿ ಫಾರ್ಮ್ನಲ್ಲಿ ನಾಯಿಗಾಯ್ತು ಕ್ವಾರಂಟೈನ್- ಎ.ಸಿ ಬದಲು ತಣ್ಣೀರು!
ಜೂನ್ 25 ರಂದು ಕುಪೇಂದ್ರ ರೆಡ್ಡಿ ಸ್ಥಾನ ತೆರವಾಗಲಿದೆ. ವಿಧಾನಸಭೆಯಿಂದ ರಾಜ್ಯಸಭೆ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ 87 ವರ್ಷದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಗೌಡರ ಮನೆಯಲ್ಲಿ ನಡೆದ ಗೌಪ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ರಾಜ್ಯಸಭೆಗೆ ಆಯ್ಕೆಯಾಗಲು 48 ಶಾಸಕರ ಬೆಂಬಲ ಬೇಕು. ಆದರೆ, ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಬಲ ಕೇವಲ 34 ಇದೆ. ಉಳಿದ ಬೆಂಬಲವನ್ನು ಕಾಂಗ್ರೆಸ್ ಶಾಸಕರಿಂದ ಪಡೆಯಲು ಜೆಡಿಎಸ್ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಜತೆಗೂ ದೇವೇಗೌಡರು ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿರಿ VIDEO: ಮಿಡತೆಗಳ ಹಾವಳಿ ಹೇಗಿದೆ ನೋಡಿ!