ತುಮಕೂರು: ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದ್ರೆ ಜೆಡಿಎಸ್ನ ಕೆಲ ಶಾಸಕರು ಪಕ್ಷ ತೊರೆಯುತ್ತಾರಾ? ಎಂಬ ಪ್ರಶ್ನೆ ಮೂಡಿದೆ.
ಗಾಗಲೇ ಕಾಂಗ್ರೆಸ್ ಸೇರಲು ಜೆಡಿಎಸ್ ಮನೆಯಿಂದ ಒಂದು ಕಾಲು ಹೊರ ಇಟ್ಟಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ಬಿಜೆಪಿ ನಿಲುವುಗಳನ್ನು ವಿರೋಧಿಸಿದವನು. ವಾಮ ಮಾರ್ಗದಲ್ಲಿ ಅಧಿಕಾರ ಅನುಭವಿಸುವ ಆಸೆ ನನಗಿಲ್ಲ. ಕುಮಾರಸ್ವಾಮಿ ನಿಲುವಿಗೆ ಅನೇಕ ನಮ್ಮ ಪಕ್ಷದ ಶಾಸಕರ ವಿರೋಧವಿದೆ. ಇದರಲ್ಲಿ ನನ್ನ ಸ್ನೇಹಿತರೂ ಇದ್ದಾರೆ. ಅದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಸ್ಫೋಟಕ ಹೇಳಿಕೆ ಇಂತಹದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿದ್ದು, ಜೆಡಿಎಸ್ಗೆ ತಲ್ಲಣ ಮೂಡಿಸಿದೆ. ಇದನ್ನೂ ಓದಿರಿ ತುಮಕೂರಲ್ಲಿ ದೇವೇಗೌಡ ಸೋತಿದ್ದು ಏಕೆ ಗೊತ್ತಾ? ಜೆಡಿಎಸ್ ಶಾಸಕರೇ ಬಿಚ್ಚಿಟ್ಟ ಸತ್ಯ ಇದು…
ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮನೆಯಲ್ಲಿ ಭಾನುವಾರ ಏರ್ಪಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಶ್ರೀನಿವಾಸ್, ಕೆ.ಎನ್. ರಾಜಣ್ಣ ನಮಗೆ ಗಾಡ್ಫಾದರ್ ಇದ್ದಂಗೆ. ಇವತ್ತು ಮನೆಗೆ ಕೆರೆದರು ಹಾಗಾಗಿ ಬಂದೆ ಎಂದರು. ಬಿಜೆಪಿ ಜತೆ ಜೆಡಿಎಸ್ ಕೈಜೋಡಿಸಿದರೆ ಹಲವು ಶಾಸಕರು ಪಕ್ಷ ತೊರೆಯಲಿದ್ದಾರೆ. ಈ ಮನಸ್ಥಿತಿ ಜೆಡಿಎಸ್ನ ಹಲವರಿಗೆ ಇದೆ. ಅಸಮಾಧಾನ ಇದೆ ಎಂದಾಗ ಅನೇಕರು ಪಕ್ಷ ತೊರೆಯುವ ಬಗ್ಗೆ ಚರ್ಚೆಯಾಗಿದೆ ಅಂತಲೇ ಅರ್ಥ. ಕೆಲವರು ಈಗಾಗಲೇ ತಮ್ಮ ಅಭಿಪ್ರಾಯ ಹೇಳಿದ್ದಾರೆ ಎಂದರು.
ಇನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಸೋಲಿಸಲು ಬಿಜೆಪಿ ಜತೆ ಜೆಡಿಎಸ್ಗೆ ಒಳ ಒಪ್ಪಂದ ಆಗಿದ್ದು ಸತ್ಯ ಎನ್ನುವ ಮೂಲಕ ಸಿದ್ದರಾಮಯ್ಯರ ಆರೋಪಕ್ಕೆ ದ್ವನಿಗೂಡಿಸಿದ ಜೆಡಿಎಸ್ ಶಾಸಕ ಶ್ರೀನಿವಾಸ್, ನಾನು ಈಗಲೂ ಜೆಡಿಎಸ್ ನಲ್ಲಿದ್ದೇನೆ. ಆದರೆ, ಎರಡೂವರೆ ವರ್ಷದವರೆಗೆ ನಿರ್ಲಿಪ್ತರಾಗಿದ್ದು, ಆ ನಂತರ ಕಾರ್ಯಕರ್ತರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವೆ ಎನ್ನುವ ಮೂಲಕ ಪಕ್ಷ ತೊರೆಯುವ ಬಗ್ಗೆ ಸುಳಿವು ಕೊಟ್ಟರು.
ಗಂಡನ ರಾಸಲೀಲೆ ವೃತ್ತಾಂತ ಬಿಚ್ಚಿಟ್ಟ ಹೆಂಡತಿ! ಈತನ ಚಾನ್ಸ್ ಆಸೆಗೆ ಬಲಿಯಾದ್ರೆ ಬದುಕೇ ನರಕ…
ಜೆಡಿಎಸ್ ಮನೆಗೆ ಬಂದ ಸಿ.ಎಂ.ಇಬ್ರಾಹಿಂ! ನಾನು ಮತ್ತು ದೇವೇಗೌಡರು ತಂದೆ-ಮಗ ಇದ್ದಂತೆ…
ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ
ಸೆಕ್ಸ್ ಮಾಡುವಾಗ ಪ್ರಜ್ಞೆ ತಪ್ಪಿದಳು, ನಾನು ಕೊಲೆ ಮಾಡಿಲ್ಲ… ಎಂದು ಕಣ್ಣೀರಿಟ್ಟ ಆರೋಪಿ