ದೇವೇಗೌಡರು ಯಾಕೆ ಕಣ್ಣೀರು ಹಾಕುತ್ತಿದ್ದಾರೋ ಗೊತ್ತಿಲ್ಲ; ಡಿ.ಕೆ ಶಿವಕುಮಾರ್ ಲೇವಡಿ

HD Devegowda

ಬೆಂಗಳೂರು: ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ವಯಸ್ಸಿನಲ್ಲಿ ನನಗೆ ಈ ರೀತಿ ಮಾಡಿದ್ದಾರೆ ಎಂದು ದೇವೇಗೌಡರು ಹಾಸನದಲ್ಲಿ ಕಣ್ಣೀರು ಹಾಕಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗೌಡರನ್ನು ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಹೀಗಾಗಿ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಇಲ್ಲ. ಅವರಿಗೆ ತಮ್ಮ ಕೊಡುಗೆ ಬಗ್ಗೆ ಹೇಳಲು ಆಗುವುದಿಲ್ಲ. ಅವರು ಏನೇ ಪ್ರಯತ್ನ ಮಾಡಲಿ, ಅವರು ಹೇಳಿರುವಂತೆ ನಾಲ್ಕು ಸೀಟು ಬರುವುದಿಲ್ಲ. ಮೂರು ಅಧಿಕೃತ, ಒಂದು ಅನಧಿಕೃತ ಸೀಟುಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ತಿಳಿಸಿದರು.
ನಮ್ಮ ಸರ್ಕಾರ ಜನರ ಜೇಬನ್ನು ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಬಿಜೆಪಿ ಜಾಹೀರಾತು ನೀಡಿದೆ. ಅವರು ಮಾಡಿರುವ ಪಿಕ್ ಪಾಕೇಟ್ ಅನ್ನು ನಮ್ಮ ಮೇಲೆ ಆರೋಪಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಶೇ.40 ಕಮಿಷನ್ ಮೂಲಕ ಪಿಕ್ ಪಾಕೆಟ್ ಮಾಡಿದ್ದಾರೆ ಎಂದು ಡಿಕೆಶಿ ಆರೋಪಿಸಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಬಿಲ್ ಕಡಿಮೆ ಮಾಡಿದ್ದೇವೆ. ಯೂನಿಟ್ ಬೆಲೆ 1.10 ರೂ. ಕಡಿಮೆ ಮಾಡಿದ್ದು, 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಅವರ ಜಾಹೀರಾತು ನೋಡಿ ನಾಚಿಕೆಯಾಗುತ್ತಿದೆ. ನಮ್ಮ ಚೊಂಬಿನ ಜಾಹೀರಾತು ಅವರಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಎಲ್ಲಿ ಬೇಕಾದರೂ ಹೋಗಿ ಪ್ರಚಾರ ಮಾಡಲಿ. ನಾವು ನಿನ್ನೆ ಮೊನ್ನೆಯಿಂದ ರಾಜಕಾರಣ ಮಾಡುತ್ತಿಲ್ಲ. ಚುನಾವಣೆ ಫಲಿತಾಂಶದ ಮರುದಿನದಿಂದಲೇ ನಾವು ನಮ್ಮ ಸೇವೆ ಮಾಡುತ್ತಿದ್ದೇವೆ. ಕೋವಿಡ್ ಸಮಯದಲ್ಲಿ ಹೆಣಗಳ ಅಂತ್ಯ ಸಂಸ್ಕಾರ ಮಾಡಿದ್ದೇವೆ. ಜನರಿಗೆ ಉಚಿತ ಔಷಧಿ, ಅಕ್ಕಿ ನೀಡಿದ್ದೇವೆ. ಜನ ಉಪಕಾರ ಸ್ಮರಣೆ ಮಾಡಲಿದ್ದಾರೆ. ಅವರು ಚುನಾವಣೆ ಇದೆ ಎಂದು ಪದೇ ಪದೆ ಬರುತ್ತಾರೆ. ಅವರು ಬರಲಿ ಅವರನ್ನು ನಾವು ಸ್ವಾಗತಿಸುತ್ತೇವೆ. ಶುಭಕೋರುತ್ತೇವೆ ಎಂದು ತಿಳಿಸಿದರು.
ಇಂಡಿಯಾ ಮೈತ್ರಿಕೂಟದ ಸದಸ್ಯ, ವಿಸಿಕೆ ಪಕ್ಷದ ಅಧ್ಯಕ್ಷ ತಮಿಳುನಾಡಿದ ತೋಳ್ಕಪ್ಪಿಯನ್ ತಿರುಮವಳವನ್ ಮಂಗಳವಾರ ನಮ್ಮ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷಕ್ಕೆ ಬೆಂಬಲ ನೀಡಲು ಬಂದಿದ್ದಾರೆ. ಕಾಂಗ್ರೆಸ್ ಪಕ್ಷದ ಪರವಾಗಿ ಅವರನ್ನು ಸ್ವಾಗತಿಸುತ್ತೇನೆ ಎಂದು ಡಿಕೆಶಿ ತಿಳಿಸಿದರು.
ವಿಸಿಕೆ ಪಕ್ಷದಿಂದ ಬೆಂಗಳೂರು ಗ್ರಾಮಾಂತರದಲ್ಲಿ ಚಂದ್ರಶೇಖರ್, ಕೋಲಾರದಲ್ಲಿ ಎಂ.ಸಿ ವೇಣು, ಬೆಂಗಳೂರು ದಕ್ಷಿಣದಲ್ಲಿ ರಾಜಕುಮಾರ್ ಅವರು ಸ್ಪರ್ಧಿಸಿದ್ದರು. ಈಗ ಅವರು ಸ್ಪರ್ಧೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಆಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಿದ್ದಾರೆ ಎಂದರು.

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…