ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ ಬೆಳೆಸಿ

blank

ದೇವದುರ್ಗ: ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗಲಿದ್ದು, ಮೊಬೈಲ್ ಗೀಳು ಬಿಡಿಸಿ ಸಮಯಪ್ರಜ್ಞೆ ಬೆಳೆಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಸಂಚಾಲಕಿ ಆರತಿ ಪುಷ್ಪಾವತಿ ಹೇಳಿದರು.

blank
blank

ತಾಲೂಕಿನ ಹೊಸೂರು ಸಿದ್ದಾಪುರದಲ್ಲಿ ಜಾಲಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿದ್ದ ಎನ್ನೆಸ್ಸೆ ಶಿಬಿರ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಸಮಯ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಸಮಯ ಹಾಗೂ ಪರಿಶ್ರಮಕ್ಕೆ ಮಹತ್ವವಿದೆ. ಯುವಕರು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಒಳ್ಳೆಯ ಸಂಸ್ಕಾರ ಪಡೆದು ಹೆತ್ತವರು, ಗುರು ಹಿರಿಯರಿಗೆ ಗೌರವ ತರಬೇಕು ಎಂದರು.

ಮುಖಂಡರಾದ ಚಂದಪ್ಪ ಬುದ್ದಿನ್ನಿ, ತಿಮ್ಮಣ್ಣ ಮುರಾಳ, ಶಿವರಾಜ ಮುರಾಳ ಹಾಗೂ ಉಪನ್ಯಾಸಕರಾದ ಗುರಣ್ಣ ರಾರೆಡ್ಡಿ, ಶಾಂತಗೌಡ, ಮೂಗವ್ವ, ಮಂಜುಳಾ, ಪ್ರಕಾಶ ಬುದ್ದಿನ್ನಿ, ಈರನಗೌಡ, ಶಶಿಕುಮಾರ, ಹನುಮಂತ್ರಾಯ ಇತರರಿದ್ದರು.

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…