ಕೌಶಲಗಳ ವೃದ್ಧಿ ಜೀವನ ಮುನ್ನಡೆಸಲು ಸಹಕಾರಿ

rasaprashne spardhe

ಹೆಬ್ರಿ: ವಿದ್ಯಾರ್ಥಿಗಳು ಅಂಕ ಗಳಿಸುವ ಯಂತ್ರಗಳಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಉದ್ಯಮಿ ಎಂ.ಕರುಣಾಕರ್ ಹೆಗ್ಡೆ ಹೇಳಿದರು.

blank

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಆಹ್ವಾನಿತ ಕಾಲೇಜುಗಳ ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ವಿದ್ಯಾಧರ ಹೆಗ್ಡೆ ಎಸ್. ಶುಭಹಾರೈಸಿದರು. ಕ್ವಿಜ್ ಮಾಸ್ಟರ್ ವೆಂಕಟೇಶ ಸ್ಪರ್ಧೆ ನಡೆಸಿಕೊಟ್ಟರು. 12 ಕಾಲೇಜುಗಳು ಭಾಗವಹಿಸಿದ್ದವು. ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಪ್ರಥಮ, ಕಾರ್ಕಳ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ದ್ವಿತೀಯ, ಮೂಡುಬಿದಿರೆ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆಯಿತು.

ಐಕ್ಯೂಎಸಿ ಸಂಚಾಲಕ ಡಾ.ಗಣೇಶ ಎಸ್., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ಪ್ರವೀಣ್ ಕುಮಾರ್ ಎಸ್., ಕಾರ್ಯಕ್ರಮ ಸಂಯೋಜಕ ವಿಜೇಂದ್ರ ಶೆಣೈ ಎಚ್. ಉಪಸ್ಥಿತರಿದ್ದರು. ಹರೀಶ್ ನಾಯ್ಕ ಸ್ವಾಗತಿಸಿದರು. ದೀಪಿಕಾ ಪ್ರಾರ್ಥಿಸಿದರು. ಸ್ನೇಹಾ ಜೆ.ಶೆಟ್ಟಿ ವಂದಿಸಿದರು. ಶ್ರೇಯಾ ಎಸ್.ಶೆಣೈ ಕಾರ್ಯಕ್ರಮ ನಿರೂಪಿಸಿದರು.

ಭೂಮಿಯ ರಕ್ಷಣೆ ಸಮಾಜದ ಜವಾಬ್ದಾರಿ

ಮಾಟುಬಲೆ ಮೀನುಗಾರರ ಕ್ರಿಕೆಟ್ ಟೂರ್ನಿ

Share This Article
blank

ಬೆಳಿಗ್ಗೆ ಈ ಸೂಪರ್​ ಫುಡ್​ಗಳನ್ನು ಸೇವಿಸಿ: ನಿಮ್ಮ ದೇಹದಲ್ಲಾಗುವ ಸಕಾರಾತ್ಮಕ ಬದಲಾವಣೆ ಗಮನಿಸಿ | Superfoods

Superfoods: ಸಾಮಾನ್ಯವಾಗಿ ಬೆಳಗಿನ ಸಮಯವು ದಿನಪೂರ್ತಿ ಮನಸ್ಥಿತಿಯನ್ನು ನಿರ್ಧರಿಸುತ್ತದೆ. ಎದ್ದ ತಕ್ಷಣ ನೀವು ಏನು ಮಾಡುತ್ತೀರಿ…

ರಸ್ತೆಯಲ್ಲಿ ಬಿದ್ದಿರುವ ಇಂತಹ ವಸ್ತುಗಳನ್ನು ದಾಟಿದ್ರೆ ಕೆಟ್ಟ ಸಮಯ ಆರಂಭವಾಗುತ್ತಂತೆ!: ಏನೀ ವಸ್ತುಗಳು ತಿಳಿಯಿರಿ.. | Vastu

Vastu : ರಸ್ತೆಯಲ್ಲಿ ಹಾಗಾಗ ವಿಚಿತ್ರ ವಸ್ತುಗಳು ಬಿದ್ದಿರುವುದನ್ನು ನಾವು ಗಮನಿಸುತ್ತೇವೆ. ಈ ವಸ್ತುಗಳ ಬಗ್ಗೆ…

blank