More

    ಅಭಿವೃದ್ಧಿ ನಿಗಮ ಸ್ಥಾಪನೆ ಖುಷಿಯ ವಿಚಾರ

    ದೇವದುರ್ಗ: ರಾಜ್ಯ ಸರ್ಕಾರ ಹೂಗಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದ್ದರಿಂದ ಹೂಗಾರ ಮಹಾಸಭಾ ತಾಲೂಕು ಘಟಕದಿಂದ ಪಟ್ಟಣದಲ್ಲಿ ಬುಧವಾರ ಸಂಭ್ರಮಾಚರಣೆ ನಡೆಯಿತು.

    ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿರುವ ಸಾವಿತ್ರಿ ಬಾಯಿ ಫುಲೆ ವೃತ್ತದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ರಾಜ್ಯ ಸರ್ಕಾರದ ಪರ ಘೋಷಣೆ ಕೂಗಿ, ಸಾರ್ವಜನಿಕರಿಗೆ ಸಿಹಿಹಂಚಿ ಸಂಭ್ರಮಿಸಿದರು. ಮಹಾಸಭಾ ತಾಲೂಕು ಅಧ್ಯಕ್ಷ ವೀರೇಶ್ ಹೂಗಾರ ಮಾತನಾಡಿ, ಹೂಗಾರ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಬಹಳ ಹಿಂದುಳಿದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂಗಾರ ಸಮುದಾಯವನ್ನು ಗುರುತಿಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿರುವುದು ಖುಷಿಯ ವಿಚಾರ ಎಂದರು. ನಂತರ ಅಂಬೇಡ್ಕರ್ ಪ್ರತಿಮೆ, ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

    ಮಾನ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂಗಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದ್ದರಿಂದ ಪಟ್ಟಣದ ಬಸವ ವೃತ್ತದ ಬಳಿ ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಹಾಗೂ ಕಲ್ಯಾಣ ಕರ್ನಾಟಕ ಹೂಗಾರ ಸಮಾಜ ತಾಲೂಕು ಘಟಕದಿಂದ ಪಟಾಕಿ ಸಿಡಿಸಿ ಬುಧವಾರ ಸಂಭ್ರಮಾಚರಣೆ ನಡೆಸಲಾಯಿತು.

    ಸಿಂಧನೂರು: ಕರ್ನಾಟಕ ಮಾಲಿ-ಮಾಲಗಾರ್ ಹಾಗೂ ಹೂಗಾರ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದಕ್ಕೆ ತಾಲೂಕು ಹೂಗಾರ ಸಮುದಾಯ ಕ್ಷೇಮಾಭಿವೃದ್ಧಿ ಸಂಘದಿಂದ ಬುಧವಾರ ಸಂಭ್ರಮಾಚರಣೆ ನಡೆಯಿತು.
    ರಾಜ್ಯದಲ್ಲಿ ಹಿಂದುಳಿದ ವರ್ಗಗಳಲ್ಲಿ ಹೂಗಾರ ಸಮುದಾಯ ಒಂದಾಗಿದ್ದು, 2000ನೇ ಇಸ್ವಿಯಿಂದ ನಡೆದಿದ್ದ ನಿರಂತರ ಹೋರಾಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಈ ಮೂಲಕ ಸಮುದಾಯದ ಏಳಿಗೆಗೆ ಮುಂದಾಗಿದೆ ಎಂದು ಹೂಗಾರ ಸಮುದಾಯ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಭೀಮಣ್ಣ ಹೂಗಾರ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts