ಸಮುದಾಯದ ಸಹಭಾಗಿತ್ವದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ

blank

ಬಿಳ್ಳೂರು ಗ್ರಾಪಂ ಉಪಾಧ್ಯಕ್ಷ ಶಿವ ಅಭಿಮತ

ಪಾತಪಾಳ್ಯ: ಸಮುದಾಯದ ಸಹಭಾಗಿತ್ವ ದೊರೆತಾಗ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಿಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಿವ ತಿಳಿಸಿದರು.
ಬಿಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್‌ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮೇಲುಸ್ತುವಾರಿ ಸಮಿತಿಯ ಪಾತ್ರವಿದೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರುವುದು, ಹಾಜರಾತಿ ಪ್ರಮಾಣ ಹೆಚ್ಚಿಸುವುದು, ಸರ್ಕಾರದ ಸೌಲಭ್ಯಗಳನ್ನು ಪ್ರತಿಯೊಂದು ಮಗುವಿಗೆ ಸಮರ್ಪಕವಾಗಿ ತಲುಪಿಸುವ ಮೂಲಕ ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ಸಮಿತಿಯ ನೀಡುತ್ತಿದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷರಾಗಿ ನಾಗರಾಜು, ಉಪಾಧ್ಯಕ್ಷೆಯಾಗಿ ರಾಧಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವೆಂಕಟೇಶ್, ಶ್ಯಾಮ್‌ಕುಮಾರ್, ಶಿವರಾಂ, ಮಹೇಶ್ವರಿ, ರೇಖಾ, ಲಕ್ಷ್ಮೀ, ಮಾಧವಿ, ಉತ್ತನ್ನ, ಜಯರಾಮ್, ಮಮತಾ, ಮಜುರುಲ್ಲಾ, ಶಾಮೀರ್, ತಹಸ್ಮೀಮ್, ಶಾಹೀದಾ, ತ್ಯಾಗರಾಜು, ಅನುಶ್ರೀ ಸದಸ್ಯರಾಗಿ ಆಯ್ಕೆಯಾಗಿರುತ್ತಾರೆ.
ಪ್ರಭಾರ ಮುಖ್ಯಶಿಕ್ಷಕ ಎನ್. ನಾಗರಾಜ್, ಸಿಆರ್‌ಪಿ ಹನುಮಂತಪ್ಪ, ಶಿಕ್ಷರಾದ ಸುಬಾನ್, ರಾಜಶೇಖರ, ಫರೂಕ್, ಸವಿತಾ, ಮಂಜುಳಾ, ರಾಜೇಶ್ವರಿ, ವರಲಕ್ಷ್ಮೀ, ಸ್ವಾತಿ, ಆಂಜನೇಯಲು ಹಾಗೂ ವಿದ್ಯಾರ್ಥಿಗಳು ಇದ್ದರು.

 

Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…