ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೆಗೂ ಇತ್ಯರ್ಥಗೊಂಡಿದ್ದು, ಸದ್ಯ ಎರಡನೇ ಬಾರಿ ದೇವೇಂದ್ರ ಫಡ್ನವಿಸ್ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ.
ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಹಾಗೂ ಡಿಸಿಎಂ ಆಗಿ ಏಕನಾಥ್ ಶಿಂಧೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸರ್ಕಾರ ರಚಿಸಲು ಮುಂದಾಗಿರುವ ಫಡ್ನವಿಸ್ ಹಾಗೂ ಏಕನಾಥ್ ಶಿಂಧೆ ರಾಜಭವನಕ್ಕೆ ತೆರಳಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ರಾಜಭವನದಲ್ಲಿ ಗುರುವಾರ ಸಂಜೆ 7 ಗಂಟೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜತೆಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಫಡ್ನವಿಸ್ ಅವರನ್ನು ಇಂದು ಬೆಳಗ್ಗೆ ಭೇಟಿಯಾಗಿದ್ದ ಏಕನಾಥ್ ಶಿಂಧೆ ಸರ್ಕಾರ ರಚನೆ ಸೇರಿದಂತೆ ಇಂದೇ ಅಧಿಕಾರ ಸ್ವೀಕರಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದರು. (ಏಜೆನ್ಸೀಸ್)
ಸಲ್ಮಾನ್ ಖಾನ್ಗೆ ಮುತ್ತು ಕೊಟ್ಟು ಟ್ರೋಲ್ ಆಗಿದ್ದ ಪಂಜಾಬ್ ಗಾಯಕಿ ಶೆಹನಾಜ್ ಪ್ರತಿಕ್ರಿಯೆ ಹೀಗಿದೆ!