ಶ್ರದ್ಧೆಭಕ್ತಿಯಿಂದ ನಡೆದ ರಾಯರ ಮಧ್ಯಾರಾಧನೆ

blank

ಕಂಪ್ಲಿ: ಇಲ್ಲಿನ ಸತ್ಯನಾರಾಯಣಪೇಟೆಯ ಶ್ರೀಮನ್ ಮದ್ವಾಚಾರ್ಯರ ಮೂಲಮಹಾಸಂಸ್ಥಾನ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಶಾಖಾಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 353ನೇ ಆರಾಧನಾ ಮಹೋತ್ಸವ ನಿಮಿತ್ತ ಮಧ್ಯಾರಾಧನೆ ಕಾರ್ಯಕ್ರಮಗಳು ಬುಧವಾರ ಶ್ರದ್ಧೆಭಕ್ತಿಗಳಿಂದ ನಡೆದವು.

ಇದನ್ನು ಓದಿ: ಪುರಂದರ ಮಂಟಪದಲ್ಲಿ ಮಧ್ಯಾರಾಧನೆ

ಬೆಳಗ್ಗೆ ನಿರ್ಮಾಲ್ಯ ವಿಸರ್ಜನೆ, ಅಷ್ಟೋತ್ತರಸಹಿತ ಫಲ ಪಂಚಾಮೃತಾಭಿಷೇಕ, ಕನಕಾಭಿಷೇಕ, ಅಲಂಕಾರ, ಸಂಜೆ ರಥೋತ್ಸವ, ತೊಟ್ಟಿಲು ಸೇವಾ ಸೇರಿ ನಾನಾ ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಗಳು ವಿಚಾರಣಾಕರ್ತ ಟಿ.ಕೊಟ್ರೇಶ, ವ್ಯವಸ್ಥಾಪಕ ಪುರುಷೋತ್ತಮಾಚಾರ್, ಅರ್ಚಕ ಕಿಶೋರಾಚಾರ್ ಪೌರೋಹಿತ್ಯದಲ್ಲಿ ನಡೆದವು.

ರಾಯರ ಬೃಂದಾವನವನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಪಟ್ಟಣ ಸೇರಿ ತಾಲೂಕಿನ ನಾನಾ ಗ್ರಾಮಗಳಿಂದ ಸದ್ಭಕ್ತರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಮಂಗಳವಾರ ಸಂಜೆ ಬಳ್ಳಾರಿಯ ಜಿಲಾನಿ ಭಾಷಾ ತಂಡದವರಿಂದ ಭರತನಾಟ್ಯ ಸೇವಾ ಪ್ರದರ್ಶನ ನಡೆಯಿತು.


Share This Article

ladies finger Benefits : ಬೆಂಡೆಕಾಯಿ ಒಳ್ಳೆಯದು, ಆದ್ರೆ ಅಪ್ಪಿತಪ್ಪಿಯೂ ಸಹ ಇವ್ರು ಬೆಂಡೆಕಾಯಿ ತಿನ್ನಲೇಬಾರದು..!

ladies finger Benefits : ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿಯು ಅನೇಕ ಪ್ರಯೋಜನಗಳನ್ನು ಹೊಂದಿದೆ ಎಂದು ನಮಗೆಲ್ಲರಿಗೂ…

ಇನ್ನೇನು ಬೇಸಿಗೆ ಶುರು… ನೀರಿನ ಜತೆ ಇದನ್ನು ಬೆರೆಸಿ ಸಿಂಪಡಿಸಿ ಹಾವುಗಳು ಮನೆ ಬಳಿ ಸುಳಿಯುವುದಿಲ್ಲ! Snake

Snake : ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದಂತೆ ತಂಪಿನ ವಾತಾವರಣ ಅರಸಿಕೊಂಡು ಹಾವುಗಳು ಜನವಸತಿ ಪ್ರದೇಶಗಳತ್ತ…

ಚಳಿಗಾಲದಲ್ಲಿ ನೀವು ಹೆಚ್ಚು ನಿದ್ರೆ ಮಾಡುವುದು ಏಕೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಉತ್ತರ… Sleep

Sleep : ಚಳಿಗಾಲ ಬಂದಾಗ ಬಹುತೇಕರಿಗೆ ತುಂಬಾ ಆಲಸ್ಯವಾಗುತ್ತದೆ. ಏನೂ ಮಾಡಲೂ ಮನಸಿರುವುದಿಲ್ಲ. ಸೋಮಾರಿತನ ಕಾಡುತ್ತದೆ.…