ಚೆನ್ನೈ: ಕಾಲಿವುಡ್ನ ಸ್ಟಾರ್ ದಂಪತಿಗಳೆಂದೇ ಖ್ಯಾತರಾಗಿದ್ದ ನಟ ಧನುಷ್ ಮತ್ತು ಸೂಪರ್ಸ್ಟಾರ್ ರಜಿನಿಕಾಂತ್ ಹಿರಿಯ ಪುತ್ರಿ ಐಶ್ವರ್ಯಾ 18 ವರ್ಷಗಳ ದಾಂಪತ್ಯ ಜೀವನಕ್ಕೆ 2022ರ ಜನವರಿ 17ರಂದು ಏಕಾಏಕಿ ಗುಡ್ ಬೈ ಹೇಳುವ ಮೂಲಕ ಚಿತ್ರರಂಗಕ್ಕೆ ಮಾತ್ರವಲ್ಲದೇ ಅಸಂಖ್ಯಾತ ಅಭಿಮಾನಿಗಳಿಗೂ ಶಾಕ್ ನೀಡಿದ್ದರು.
ಡಿವೋರ್ಸ್ ಬಳಿಕ ಇಬ್ಬರು ತಮ್ಮ ಮಕ್ಕಳಿಗಾಗಿ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ವಿಚ್ಛೇದನ ಹಿಂತೆಗೆದುಕೊಳ್ಳಲು ಯೋಜಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಇಬ್ಬರ ಕುಟುಂಬಗಳು ತಾರಾದಂಪತಿಯನ್ನು ಒಂದಾಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದೆಲ್ಲ ಬೆಳವಣಿಗೆಯ ನಡುವೆ ಇದೀಗ ಬ್ರೇಕಿಂಗ್ ನ್ಯೂಸ್ ಒಂದು ಬಂದಿದೆ. ಅದೇನೆಂದರೆ ನಟ ಧನುಷ್ ಮತ್ತೆ ಮದುವೆಯಾಗಲು ಮುಂದಾಗಿದ್ದಾರಂತೆ.
ಇದನ್ನೂ ಓದಿ: ಯುಗಾದಿ ಹಿನ್ನೆಲೆ ಚರಂಡಿ ಸ್ವಚ್ಛ ಮಾಡುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರ ದುರಂತ ಸಾವು
ನಟ ಹಾಗೂ ಪತ್ರಕರ್ತ ಬೈಲ್ವಾನ್ ರಂಗನಾಥನ್ ಕಳೆದ ಕೆಲ ವರ್ಷಗಳಿಂದ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ನಟ ಹಾಗೂ ನಟಿಯರನ್ನು ಗುರಿಯಾಗಿರಿಸಿಕೊಂಡು ಅವರ ವಿರುದ್ಧ ಗಾಸಿಪ್ಗಳನ್ನು ಸೃಷ್ಟಿ ಮಾಡುವ ಮೂಲಕ ಭಾರೀ ಸುದ್ದಿಯಾಗುತ್ತಿರುವುದಲ್ಲದೆ ಕಲಾವಿದರ ಆಕ್ರೋಶಕ್ಕೂ ಕಾರಣವಾಗಿದ್ದಾರೆ. ಅನೇಕ ಕಲಾವಿದರು ರಂಗನಾಥನ್ ವಿರುದ್ಧ ತಮ್ಮ ಧ್ವನಿ ಕೂಡ ಎತ್ತಿದ್ದಾರೆ. ಅದರಲ್ಲೂ ನಟಿಯರೇ ಹೆಚ್ಚು. ಇದೀಗ ರಂಗನಾಥನ್ ಧನುಷ್ ಬಗ್ಗೆ ಸ್ಫೋಟಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಆದರೆ, ಈ ಮಾಹಿತಿ ಎಷ್ಟು ಸತ್ಯವೋ ಎಂಬುದನ್ನು ಆತನೇ ತಿಳಿಸಬೇಕಿದೆ.
ನಟ ಧನುಷ್, ದಕ್ಷಿಣ ಭಾರತದ ನಟಿ ಮೀನಾ ಅವರನ್ನು ಮದುವೆ ಆಗಲು ಪ್ಲಾನ್ ಮಾಡಿದ್ದಾರಂತೆ. ಕೆಲವೇ ತಿಂಗಳ ಹಿಂದೆ ಮೀನಾ ಅವರ ಪತಿ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ. ಐಶ್ವರ್ಯಾ ಜೊತೆಗಿನ ಸಂಬಂಧವನ್ನು ಧನುಷ್ ಕಡಿದುಕೊಂಡಿರುವುದರಿಂದ ಜುಲೈನಲ್ಲಿ ಮೀನಾರನ್ನು ಧನುಷ್ ಮದುವೆ ಆಗಲಿದ್ದಾರೆ ಎಂದು ಬೈಲ್ವಾನ್ ರಂಗನಾಥ್ ಹೇಳಿದ್ದಾರೆ.
ಇಬ್ಬರು ಕೂಡ ಯುವ ವಯಸ್ಸಿನವರಾಗಿದ್ದು ತಮ್ಮ ಜೀವನ ಸಂಗಾತಿಗಳಿಲ್ಲದೆ ಬದುಕುತ್ತಿದ್ದಾರೆ. ಹಾಗಾಗಿ ಇಬ್ಬರೂ ಒಂದಾಗಿ ಬೇರೆ ಜೀವನ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ. ಕೆಲವೊಮ್ಮೆ ಮದುವೆಯಾಗದೆ ಇಬ್ಬರೂ ಒಟ್ಟಿಗೆ ವಾಸಿಸುವ ಸಾಧ್ಯತೆಯಿದೆ ಎಂದು ಬೈಲ್ವಾನ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ. ಇದಕ್ಕೆ ಮೀನಾ ಅವರಾಗಲಿ ಅಥವಾ ಧನುಷ್ ಆಗಲಿ ಪ್ರತಿಕ್ರಿಯೆ ನೀಡಿಲ್ಲ. ಮುಂದೆ ಪ್ರತಿಕ್ರಿಯೆ ನೀಡಲಿದ್ದಾರಾ ಎಂದು ಕಾದು ನೋಡಬೇಕಿದೆ.
ಜನವರಿ 17ರಂದು ಟ್ವೀಟ್ ಮಾಡಿದ್ದ ದಂಪತಿ
ಜ. 17 ರಂದು ಟ್ವೀಟ್ ಮೂಲಕ ಡಿವೋರ್ಸ್ ನಿರ್ಧಾರ ತಿಳಿಸಿದ ಧನುಷ್, ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳು ಒಟ್ಟಿಗೆ ಕಳೆದೆವು. ಈ ಸುದೀರ್ಘ ಪ್ರಯಾಣವು ಬೆಳವಣಿಗೆ, ತಿಳುವಳಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿತ್ತು. ಆದರೆ, ಇಂದು ನಾವು ನಮ್ಮ ದಾರಿಯಲ್ಲಿ ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ ಎಂದು ಧನುಷ್ ಟ್ವೀಟ್ ಮಾಡಿದ್ದರು. ಇಷ್ಟೇ ಅಲ್ಲದೆ, ಜನರಲ್ಲಿ ಮನವಿಯೊಂದನ್ನು ಮಾಡಿದ್ದರು. ನಮ್ಮ ನಿರ್ಧಾರವನ್ನು ಗೌರವಿಸಿ, ನಮಗೆ ಬೇಕಾಗಿರುವ ಖಾಸಗಿತನವನ್ನು ನೀಡಿ ಎಂದಿದ್ದರು. ಐಶ್ವರ್ಯಾ ಕೂಡ ಹೇಳಿಕೆಯನ್ನು ನೀಡಿದ್ದು, ಹೆಚ್ಚಿಗೆ ಹೇಳುವ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ಪ್ರೀತಿ ಮಾತ್ರ ಅಗತ್ಯ ಎಂದು ಜನರಲ್ಲಿ ಕೋರಿದ್ದರು.
ಇದನ್ನೂ ಓದಿ: ಈಗಿನ ಟೀಮ್ ಇಂಡಿಯಾದಲ್ಲಿ ತನ್ನಂತೆ ಬ್ಯಾಟಿಂಗ್ ಮಾಡುವ ಆಟಗಾರ ಯಾರೆಂಬುದನ್ನು ತಿಳಿಸಿದ ವೀರೂ!
ಅಂದಹಾಗೆ ಐಶ್ವರ್ಯಾ ಮತ್ತು ಧನುಷ್ 2004ರ ನವೆಂಬರ್ 18ರಂದು ಮದುವೆಯಾದರು. ವಿವಾಹಕ್ಕೂ ಮುನ್ನ ದಂಪತಿ 6 ತಿಂಗಳು ಡೇಟಿಂಗ್ ನಡೆಸಿದ್ದರು. ದಂಪತಿಗಳಿಗೆ ಯಾತ್ರ ಮತ್ತು ಲಿಂಗ ಹೆಸರಿನ ಇಬ್ಬರು ಗಂಡು ಮಕ್ಕಳಿದ್ದಾರೆ.
ಅಂದಹಾಗೆ ಮೀನಾ ಅವರ ಪತಿ ವಿದ್ಯಾಸಾಗರ್ 2022, ಜೂನ್ 28ರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ವಿದ್ಯಾಸಾಗರ್ ಅವರು ಬಹು ಅಂಗಾಂಗ ವೈಫಲ್ಯ ಮತ್ತು ದೀರ್ಘಕಾಲದ ಕಾಯಿಲೆಯಿಂದ ಕೊನೆಯುಸಿರೆಳೆದರು. ಮೀನಾ ಮತ್ತು ವಿದ್ಯಾಸಾಗರ್ ಅವರು 2009ರ ಜುಲೈ 12ರಲ್ಲಿ ಮದುವೆಯಾದರು. ದಂಪತಿಗೆ ನೈನಿಕಾ ಹೆಸರಿನ ಹೆಣ್ಣು ಮಗಳಿದ್ದಾಳೆ. ನೈನಿಕಾ, ಅಟ್ಲೀ ನಿರ್ದೇಶನದ ಥೇರಿ ಸಿನಿಮಾದಲ್ಲಿ ನಟ ವಿಜಯ್ ಮಗಳಾಗಿ ನಟಿಸಿದ್ದಾಳೆ. (ಏಜೆನ್ಸೀಸ್)
ನಟಿ ಮೀನಾಗೆ ಈ ನಟನ ಮೇಲೆ ನಿಜವಾಗಿ ಲವ್ ಆಗಿತ್ತಂತೆ! ಮದ್ವೆ ದಿನ ಕಣ್ಣೀರು ಸಹ ಹಾಕಿದ್ದರಂತೆ