More

    ತಿರುಮಲ ತಿರುಪತಿ ದೇವಸ್ಥಾನಕ್ಕೆ ‘ಧರ್ಮ ರಥ’ ನೀಡಿದ ಸುಧಾ ಮೂರ್ತಿ

    ಹೈದರಾಬಾದ್: ಸಾರ್ವಜನಿಕ ಹಿತಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ನೀಡುತ್ತಲೇ ಬಂದಿರುವ ಇನ್​ಫೊಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಇದೀಗ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಇಂದು ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ‘ಧರ್ಮ ರಥ’ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.

    ಸುಮಾರು 42 ಲಕ್ಷ ರೂಪಾಯಿ ವೆಚ್ಚದ ಈ ಧರ್ಮ ರಥ ವಾಹನ ನೀಡಿದ ನಂತರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸುಧಾ ಮೂರ್ತಿ ಮತ್ತು ಕುಟುಂಬದ ಕೆಲವು ಸದಸ್ಯರು ವಿಶೇಷ ಪೂಜೆಯನ್ನು ಸಲ್ಲಿಸಿದರು.

    ಈ ಸಂದರ್ಭದಲ್ಲಿ ಚಿತ್ರ ನಿರ್ಮಾಪಕ ರಮೇಶ್ ರೆಡ್ಡಿ, ಸುಧಾ ಮೂರ್ತಿ ಅವರ ಸಹೋದರಿ ಹಾಗೂ ಸ್ನೇಹಿತರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆ ಎಂದು ಹೇಳಲಾಗಿದೆ.

    ತಿರುಮಲ ತಿರುಪತಿ ದೇವಸ್ಥಾನಕ್ಕೆ 'ಧರ್ಮ ರಥ' ನೀಡಿದ ಸುಧಾ ಮೂರ್ತಿ

    ರಾಜ್ಯಸಭೆಗೆ ನಾಲ್ವರ ನೇಮಕ: ಏನಿದೆ ವಿಶೇಷ, ಏನೇನಕ್ಕೆ ಆದ್ಯತೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts