ಹೈದರಾಬಾದ್: ಸಾರ್ವಜನಿಕ ಹಿತಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ನೀಡುತ್ತಲೇ ಬಂದಿರುವ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಇದೀಗ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಇಂದು ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ‘ಧರ್ಮ ರಥ’ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.
ಸುಮಾರು 42 ಲಕ್ಷ ರೂಪಾಯಿ ವೆಚ್ಚದ ಈ ಧರ್ಮ ರಥ ವಾಹನ ನೀಡಿದ ನಂತರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸುಧಾ ಮೂರ್ತಿ ಮತ್ತು ಕುಟುಂಬದ ಕೆಲವು ಸದಸ್ಯರು ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಿತ್ರ ನಿರ್ಮಾಪಕ ರಮೇಶ್ ರೆಡ್ಡಿ, ಸುಧಾ ಮೂರ್ತಿ ಅವರ ಸಹೋದರಿ ಹಾಗೂ ಸ್ನೇಹಿತರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆ ಎಂದು ಹೇಳಲಾಗಿದೆ.
ರಾಜ್ಯಸಭೆಗೆ ನಾಲ್ವರ ನೇಮಕ: ಏನಿದೆ ವಿಶೇಷ, ಏನೇನಕ್ಕೆ ಆದ್ಯತೆ?