More

    ಸೇವೆಯಿಂದ ಸಾಧನೆಯ ಸಾರ್ಥಕತೆ, ರಾಜ್ಯ ಪ್ರಶಸ್ತಿ ಸ್ವೀಕರಿಸಿ ಡಾ.ಹೇಮಾವತಿ ವಿ.ಹೆಗ್ಗಡೆ ಅಭಿಮತ

    ಮಂಗಳೂರು: ಕ್ಷೇತ್ರದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆ ಆರಂಭವಾದಾಗಿನಿಂದ ರಾಜ್ಯವ್ಯಾಪಿಯಾಗಿ ಮಹಿಳೆಯರ ಜೀವನ ಮಟ್ಟ ಅಭಿವೃದ್ಧಿಗಾಗಿ ಸಮಗ್ರವಾಗಿ ಕೆಲಸ ಮಾಡಿದ್ದೇವೆ. ಈ ಸಾಧನೆಯ ಹಿಂದೆ ಯೋಜನೆಯ ಕಾರ್ಯಕರ್ತರ ಶ್ರಮ ದೊಡ್ಡದು. ಸೇವಾ ಮನೋಭಾವದಿಂದ ಮಾಡಿದ ಸಾಧನೆ ಜೀವನದಲ್ಲಿ ಸಾರ್ಥಕತೆ ತಂದುಕೊಡುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ವಿ.ಹೆಗ್ಗಡೆ ಹೇಳಿದರು.

    ಮಹಿಳಾ ಸಬಲೀಕರಣಕ್ಕೆ ನೀಡಿದ ಅನನ್ಯ ಸೇವೆಗಾಗಿ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರತಿಷ್ಠಿತ ಸಾಧನಾ ರಾಜ್ಯ ಪ್ರಶಸ್ತಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಚೇರಿ ಸಭಾಂಗಣದಲ್ಲಿ ಸೋಮವಾರ ಸ್ವೀಕರಿಸಿ ಮಾತನಾಡಿದರು.

    ಹಿರಿಯ ಸಾಹಿತಿ ಇರಾ ನೇಮು ಪೂಜಾರಿ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಶ್ರದ್ಧಾ ಅಮಿತ್, .ಎಸ್.ಅಮಿತ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಹಾಗೂ ಸಾಧನಾ ರಾಜ್ಯ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಕಾ.ವೀ.ಕೃಷ್ಣದಾಸ್, ಸಂಚಾಲಕಿ ಲತಾ ಕೃಷ್ಣದಾಸ್, ಕಾರ್ಯದರ್ಶಿ ರಾಜೇಶ್ವರಿ ಮಂಜುನಾಥ್, ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಾದ ಶಕುಂತಳಾ ಬೆಳ್ಮಣ್, ಸಂಘಟಕ, ಉದ್ಯಮಿ ಗುರುಪ್ರಸಾದ್ ಕಡಂಬಾರ್, .. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ತುಳು ಲಿಪಿ ಶಿಕ್ಷಕಿ, ಕವಯಿತ್ರಿ ಗೀತಾ ಲಕ್ಷ್ಮೀಶ್ ಮತ್ತಿತರರು ಅತಿಥಿಗಳಾಗಿದ್ದರು. ಆರ್‌ಜೆ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts