More

    ಧಾರವಾಡ ಸಂಸದ ಕ್ರೀಡಾ ಮಹೋತ್ಸವ; ಪುರುಷರ ಕಬಡ್ಡಿ ಪಂದ್ಯಾವಳಿ 20ರಿಂದ

    ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಸ್ತುತಪಡಿಸುವ `ಧಾರವಾಡ ಸಂಸದ ಕ್ರೀಡಾ ಮಹೋತ್ಸವ’ ಅಂಗವಾಗಿ ಧಾರವಾಡ ಕ್ಷೇತ್ರದ ನರೇಂದ್ರ ಗ್ರಾಮದಲ್ಲಿ 20 ಮತ್ತು 21ರಂದು ಪುರುಷರ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಗ್ರಾಮÁಂತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಂಕರ ಕೋಮಾರದೇಸಾಯಿ ಹೇಳಿದರು.
    ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಪ್ರಥಮ ಬಹುಮಾನ ೪೦,೦೦೦ ರೂಪಾಯಿ, ದ್ವಿತೀಯ ೨೦,೦೦೦, ತೃತೀಯ ಮತ್ತು ಚತುರ್ಥ ಸ್ಥಾನ ಪಡೆದ ತಂಡಗಳಿಗೆ ೧೦,೦೦೦ ನಗದು ಬಹುಮಾನ ನೀಡಲಾಗುವುದು. ಅಲ್ಲದೆ, ಬೆಸ್ಟ್ ರೈಡರ್, ಕ್ಯಾಚರ್ ಮತ್ತು ಆಲ್‌ರೌಂಡರ್‌ಗಳಿಗೆ ೫,೦೦೦ ರೂಪಾಯಿ ಬಹುಮÁನ ಇದೆ. ಪಂದ್ಯಾವಳಿಯಲ್ಲಿ ೧೮ ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು ಎಂದರು.
    ಮಾಜಿ ಶಾಸಕ ಅಮೃತ ದೇಸಾಯಿ ಮಾತನಾಡಿ, ೨೦ರಂದು ಬೆಳಗ್ಗೆ ೯ ಗಂಟೆಗೆ ಪಂದ್ಯಾವಳಿ ಉದ್ಘಾಟನೆ ನಡೆಯಲಿದೆ. ಸಂಜೆ ೭ ಗಂಟೆಗೆ ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ ನೇತೃತ್ವದ ತಂಡದಿAದ ಸಂಗೀತ ಕಾರ್ಯಕ್ರಮ ಜರುಗಲಿದೆ. ಜಾನಪದ ಗಾಯಕ ಮÁಳು ನಿಪನಾ ಜಾನಪದ ಗೀತೆಗಳನ್ನು ಪ್ರಸ್ತುತಪಡಿಸುವರು ಎಂದರು.
    ಇದೇವೇಳೇ ಪಂದ್ಯಾವಳಿಯ ಲಾಂಛನ ಅನಾವರಣ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts