ಬೆಂಗಳೂರು: ‘ಲೂಸಿಯಾ’ ಪವನ್ ಕುಮಾರ್, ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು ಅವರಿಗಾಗಿ ‘ಧೂಮಂ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಕಳೆದ ಅಕ್ಟೋಬರ್ನಲ್ಲಷ್ಟೇ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ಪ್ರಾರಂಭವಾಗಿತ್ತು. ಅದಾಗಿ ಮೂರು ತಿಂಗಳಲ್ಲಿ ಇದೀಗ ಮುಕ್ತಾಯವಾಗಿದೆ.
ಇದನ್ನೂ ಓದಿ: ಗಾಂಧಿ-ಗೋಡ್ಸೆ ಟ್ರೇಲರ್ ಬಿಡುಗಡೆ; ಕುತೂಹಲ ಮೂಡಿಸಿರುವ ರಾಜ್ಕುಮಾರ್ ಸಂತೋಷಿ ಸಿನಿಮಾ
ಈ ವಿಷಯವನ್ನು ಸ್ವತಃ ಹೊಂಬಾಳೆ ಫಿಲಂಸ್ ಸೋಷಿಯಲ್ ಮೀಡಿಯಾ ಮೂಲಕ ಘೋಷಿಸಿದೆ. ಚಿತ್ರತಂಡದವರೆಲ್ಲ ಇರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದೆ. We’ge got the shots, cut the lights’ ಎಂದು ಹೇಳಿಕೊಂಡಿದೆ.
‘ಯೂ ರ್ಟನ್’ನ ತೆಲುಗು ರಿಮೇಕ್ ಬಳಿಕ ‘ಲೂಸಿಯಾ’ ಪವನ್ ಯಾವುದೇ ಸಿನಿಮಾ ನಿರ್ದೇಶನ ಮಾಡಿರಲಿಲ್ಲ. ಪುನೀತ್ ರಾಜಕುಮಾರ್ ಅಭಿನಯದಲ್ಲಿ ‘ದ್ವಿತ್ವ’ ಎಂಬ ಚಿತ್ರವನ್ನು ನಿರ್ದೇಶಿಸುವುದಾಗಿ ಘೋಷಿಸಿದರೂ, ಪುನೀತ್ ನಿಧನದಿಂದ ಆ ಚಿತ್ರ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಆ ಚಿತ್ರವನ್ನು ನಿರ್ಮಿಸಬೇಕಿದ್ದ ಹೊಂಬಾಳೆ ಫಿಲಂಸ್ಗಾಗಿ ‘ಧೂಮಂ’ ಚಿತ್ರವನ್ನು ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ: 64ನೇ ವಯಸ್ಸಿನಲ್ಲಿ ಮೂರನೇ ಮದುವೆ! ಹಿರಿಯ ನಟಿ ಜಯಸುಧಾ ಕೊಟ್ಟ ಸ್ಪಷ್ಟನೆ ಹೀಗಿದೆ…
‘ಧೂಮಂ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾ. ಇದೊಂದು ಮಲಯಾಳಂ ಚಿತ್ರವಾಗಿದ್ದು, ಕನ್ನಡ, ತೆಲುಗು ಮತ್ತು ತಮಿಳಿಗೂ ಡಬ್ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲಯಾಳಂ ಚಿತ್ರರಂಗಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ಫಹಾದ್ ಫಾಸಿಲ್ ಮತ್ತು ತಮಿಳಿನ ‘ಸೂರರೈ ಪೊಟ್ರು’ ಚಿತ್ರದಲ್ಲಿ ನಟಿಸಿರುವ ನಟಿ ಅಪರ್ಣಾ ಬಾಲಮುರಳಿ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ, ಪ್ರೀತಾ ಜಯರಾಮನ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
'We've got the shots, cut the lights'!
It's a wrap! Exciting times as we complete filming for #Dhoomam 🎥#FahadhFaasil @pawanfilms #VijayKiragandur @aparnabala2 @hombalefilms @HombaleGroup @Poornac38242912 #PreethaJayaraman @AneesNadodi @roshanmathew2 @DhoomamFilm pic.twitter.com/8huRnnin91— Hombale Films (@hombalefilms) January 13, 2023
ನರೇಶ್-ಪವಿತ್ರಾ ಲೋಕೇಶ್ ಮದುವೆ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಟಾಲಿವುಡ್ನ ಹಿರಿಯ ನಿರ್ಮಾಪಕ!