ನೇತಾಜಿ ಜೀವನ ನಮ್ಮೆಲ್ಲರಿಗೆ ಸ್ಪೂರ್ತಿ

blank

ಕೊಪ್ಪಳ: ಭಾರತಕ್ಕೆ ಜೈ ಹಿಂದ್​ ಎಂಬ ಘೋಷವಾಕ್ಯ ನೀಡಿದ ನೇತಾಜಿ ಸುಭಾಷಚಂದ್ರ ಬೋಸ್​ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು ಎಂದು ಹಿರಿಯ ವರದಿಗಾರ ಶರಣಪ್ಪ ಬಾಚಲಾಪುರ ಹೇಳಿದರು.

ನಗರದ ಸರಸ್ವತಿ ವಿದ್ಯಾಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನೇತಾಜಿ ಸುಭಾಷಚಂದ್ರ ಬೋಸ್​ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬ್ರಿಟಿಷರನ್ನು ಭಾರತದಿಂದ ಹೊಡೆದೊಡಿಸಿ ಭಾರತ ಮಾತೆಯನ್ನು ಬಂಧನದಿಂದ ಮುಕ್ತಗೊಳಿಸಬೇಕೆಂಬುದು ಬೋಸ್​ ಕನಸಾಗಿತ್ತು. ಮಂದಗಾಮಿಗಳು, ತೀವ್ರಗಾಮಿಗಳು ಬಣದ ಹೋರಾಟ ಭಿನ್ನವಾಗಿದ್ದರೂ ಗುರಿ ಒಂದೇ ಆಗಿತ್ತು. ನೇತಾಜಿ ಜೀವನ ಸದಾ ನಮಗೆ ಸ್ಪೂರ್ತಿ. ಅವರ ಆದರ್ಶಗಳನ್ನು ಯುವಕರು ಅಳವಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಅನೇಕ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಕಳವಳ ವ್ಯಕ್ಯಪಡಿಸಿದರು.

ವಿದ್ಯಾರ್ಥಿಗಳಾದ ಅರ್ಪಿತಾ, ಸಂಗೀತಾ, ಶಿವಪ್ರಸಾದ, ಪೃಥ್ವಿರಾಜ್​ ನೇತಾಜಿ ಬಗ್ಗೆ ಮಾತನಾಡಿದರು. ಆಡಳಿತಾಧಿಕಾರಿ ಆರ್​.ಎಚ್​.ಅತ್ತನೂರು, ಮುಖ್ಯ ಶಿಕ್ಷಕಿ ರೇಣುಕಾ ಅತ್ತನೂರು, ಶಿಕ್ಷಕರಾದ ಅನೀಶ್​, ಲಕ್ಷಿ$್ಮ, ತಮನ್ನಾ ಇತರರಿದ್ದರು.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…