ಚಿಕ್ಕಮಗಳೂರು: ಕಡೂರು ತಾಲೂಕು ಗುಣಸಾಗರದಲ್ಲಿ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ಡೆತ್ನೋಟ್ ಬರೆದಿಟ್ಟಿದ್ದಾರೆಯೇ? ಹೀಗೊಂದು ಪ್ರಶ್ನೆ ಕಾಡುತ್ತಿದ್ದು, ಪೊಲೀಸರು ವಶಪಡಿಸಿಕೊಂಡಿರುವ ದಾಖಲೆಗಳಲ್ಲಿ ಡೆತ್ನೋಟ್ ಕೂಡ ಇದೆ ಎಂಬ ಸುದ್ದಿ ಹರಿದಾಡುತ್ತಿದೆ.
ಡೆತ್ನೋಟ್ನಲ್ಲಿ ಏನಿದೆ ಎಂಬ ಅಂಶ ಇನ್ನೂ ಬಹಿರಂಗವಾಗಿಲ್ಲ. ಎಲ್ಲರ ಗಮನವೂ ಸದ್ಯ ವಿಧಾನಪರಿಷತ್ನಲ್ಲಿ ಡಿಸೆಂಬರ್ 15ರಂದು ನಡೆದ ಗದ್ದಲದ ಸುತ್ತವೇ ಇದೆ. ಅದುವೇ ಆತ್ಮಹತ್ಯೆಗೆ ಕಾರಣವಾಯಿತಾ ಎಂಬ ಸಂದೇಹವೂ ಎಲ್ಲರನ್ನೂ ಕಾಡಿದೆ. ಅಂದು ಅವರು ನೀಡಿದ ಪ್ರತಿಕ್ರಿಯೆಯನ್ನೂ ಎಲ್ಲರೂ ನೆನಪಿಸುತ್ತಿದ್ದಾರೆ.
ಅಂದು ಧರ್ಮೇಗೌಡರ ಪ್ರತಿಕ್ರಿಯೆ ಹೀಗಿತ್ತು – ‘ಅವರು ಪೀಠದಲ್ಲಿ ಕೂರಿಸಿದ್ರು, ಇವರು ಪೀಠದಿಂದ ಎಳೆದೊಯ್ದರು-ನಾನೇನು ಮಾಡಲಿ?’
ವಿಧಾನ ಪರಿಷತ್ ಹೈಡ್ರಾಮಾ: ಘಟಾನುಘಟಿ ರಾಜಕೀಯ ನಾಯಕರು ಅನುಭವವನ್ನು ಧಾರೆ ಎರೆದ ಮೇಲ್ಮನೆ ಎಂಬ ಅಗ್ಗಳಿಕೆಗೆ ಪಾತ್ರವಾಗಿದ್ದ ವಿಧಾನಪರಿತ್ ಡಿಸೆಂಬರ್ 15ರಂದು ಸದಸ್ಯರ ಅತಿರೇಕದ ವರ್ತನೆಗೆ ಸಾಕ್ಷಿಯಾಯಿತಲ್ಲದೇ, ಇತಿಹಾಸದ ಪುಟಗಳಲ್ಲಿ ಕಪ್ಪುಚುಕ್ಕೆಯೊಂದು ದಾಖಲಾಯಿತು. ಪೂರ್ಣವಿವರದ ಸ್ಮರಣೆಗೆ ಈ ಕೊಂಡಿ ಕ್ಲಿಕ್ಕಿಸಿ.. ವಿಧಾನ ಪರಿಷತ್ ಹೈಡ್ರಾಮಾ ಹೇಗಾಯಿತು- ಯಾಕಾಯಿತು?
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಶಾಕಿಂಗ್ ನ್ಯೂಸ್ ! ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆ..
‘ನಾನು ಅತ್ಯಂತ ಮೆಲುದನಿಯಲ್ಲಿ “ಏನೋ ಸುದ್ದಿ ಕೇಳಿದೆ ನಿಜವಾ” ಎಂದು ಸಿಟಿ ರವಿ ಅವರನ್ನು ಪ್ರಶ್ನಿಸಿದೆ..’