More

    ದೂರು ನೀಡಿರುವುದರಲ್ಲಿ ನನ್ನ ಪಾತ್ರವಿಲ್ಲ

    ಕೆ.ಆರ್.ನಗರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಕೆ.ಆರ್.ನಗರದ ಸಂತ್ರಸ್ತೆಯ ಮಗ ಎಚ್.ಡಿ.ರೇವಣ್ಣ ಮತ್ತು ಸತೀಶ್ ಬಾಬು ವಿರುದ್ಧ ಅಪಹರಣದ ದೂರು ನೀಡಿರುವುದರಲ್ಲಿ ನನ್ನ ಪಾತ್ರವಿಲ್ಲ ಎಂದು ಶಾಸಕ ಡಿ.ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ.


    ದೂರು ಕೊಡಿಸುವುದರಲ್ಲಿ ನನ್ನ ಪಾತ್ರ ಇದೆ ಎಂದು ಬೇಲೂರು ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಮತ್ತು ವಕೀಲ ಮಾರೇನಹಳ್ಳಿ ಗೋಪಾಲ್ ಮತ್ತಿತರರು ಸುಳ್ಳು ಆರೋಪ ಮಾಡಿದ್ದು ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ಷಡ್ಯಂತ್ರವಾಗಿದೆ. ಮೊದಲ ಹಂತದ ಲೋಕಸಭೆ ಚುನಾವಣೆ ನಡೆದ ನಂತರ ನಾನು ಪಕ್ಷದ ಆದೇಶದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೆ. ಪ್ರಕರಣದ ಸಂಬಂಧ ನನಗೆ ಯಾವುದೇ ಮಾಹಿತಿ ಇಲ್ಲ. ಸಂತ್ರಸ್ತೆಯ ಮಗನ ಪರಿಚಯ ನನಗೆ ಇಲ್ಲ. ಆತನ ಜತೆ ನಾನು ಮಾತನಾಡಿಯೂ ಇಲ್ಲ. ಹೀಗಿರುವಾಗ ನಾನು ಹೇಗೆ ದೂರು ಕೊಡಿಸಲು ಸಾಧ್ಯ. ಇಂತಹ ಸುಳ್ಳು ಸುದ್ದಿ ಮತ್ತು ಅಪಪ್ರಚಾರಗಳಿಗೆ ಯಾರೂ ಕಿವಿಗೊಡಬಾರದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


    ನನ್ನ ವಿರುದ್ಧ ಸಲ್ಲದ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಹೋರಾಟ ನಡೆಸುವುದರ ಜತೆಗೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts