ಸಮರ್ಥವಾಗಿ ಎದುರಿಸಿದಾಗ ಸಂಕಷ್ಟ ದೂರ

blank

ವಿಜಯವಾಣಿ ಸುದ್ದಿಜಾಲ ಹೆಬ್ರಿ

blank

ಜೀವನ ಎಂಬುದು ಬಟ್ಟೆ ಇದ್ದಹಾಗೆ. ಕೊಳೆ ಆದರೆ ತೊಳೆಯುತ್ತೇವೆ, ಹರಿದರೆ ಹೊಲಿಯುತ್ತೇವೆ. ಹಾಗೆಯೇ ಜೀವನದಲ್ಲಿ ಯಾವುದೇ ಸಂಕಷ್ಟಗಳು ಬಂದಾಗ ಸಮರ್ಥವಾಗಿ ಎದುರಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿನ್ಸೆಂಟ್ ಪಾಯಸ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಬಚ್ಚಪ್ಪು ಒಕ್ಕೂಟದ ಏಳು ಸಂಘಗಳ ಬೆಳ್ಳಿ ಹಬ್ಬದ ಪ್ರಯುಕ್ತ ನಡೆದ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ವಾಗ್ಮಿ ದಾಮೋದರ ಶರ್ಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನೊಂದ ವ್ಯಕ್ತಿಗೆ ಸಹಾಯ ಮಾಡುವ ಕೆಲಸ ಯೋಜನೆಯಿಂದ ಆಗಿದೆ. ಹನ್ನೊಂದು ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಿಗೆ ಅನುದಾನ ನೀಡಿ, ದೇವಸ್ಥಾನ ಜೀರ್ಣೋದ್ಧಾರ, ಕೆರೆಗಳ ಹೂಳೆತ್ತುವಿಕೆ, ಮಧ್ಯವರ್ಜನ ಶಿಬಿರದ ಮೂಲಕ ಸಮಾಜ ಕಟ್ಟಿಕೊಟ್ಟಿದ್ದಾರೆ ಎಂದರು.

ಹಿರಿಯ ಸದಸ್ಯರಾದ ರಾಜು ಹಾಂಡ, ಶೀನ ನಾಯ್ಕ, ಗೋಪಾಲ ನಾಯ್ಕ, ಕ್ರಿಯಾಶೀಲ ಸೇವಾ ಪ್ರತಿನಿಧಿ ಕಾಂತಿ ಹೆಗ್ಡೆ ಅವರನ್ನು ಗೌರವಿಸಲಾಯಿತು.
ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ, ಯೋಜನೆಯ ಪ್ರಮುಖರಾದ ಶಾಲಿನಿ ಭಂಡಾರಿ, ಪ್ರವೀಣ್ ಹೆಗ್ಡೆ, ನರೇಂದ್ರ ನಾಯಕ್, ಯೋಜನೆಯ ಸದಸ್ಯರು ಉಪಸ್ಥಿತರಿದ್ದರು. ಮೇಲ್ವಿಚಾರಕ ಉದಯ್ ಕುಲಾಲ್ ನಿರೂಪಿಸಿದರು. ವಿಜಯ ಶೆಟ್ಟಿ ಸ್ವಾಗತಿಸಿದರು. ಪ್ರಸಾದ್ ಶೆಟ್ಟಿ ವಂದಿಸಿದರು.

ಮಣೂರು ದೇಗುಲ ವಾರ್ಷಿಕ ಜಾತ್ರೆಗೆ ಚಾಲನೆ

ಮಾಣಿ ಚೆನ್ನಕೇಶವ ದೇಗುಲ ವಾರ್ಷಿಕ ಜಾತ್ರೆ

 

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…