More

    ಕಷ್ಟಗಳನ್ನು ಎದುರಿಸುವ ಶಕ್ತಿ ರೂಢಿಸಿಕೊಳ್ಳಿ

    ಯಲಬುರ್ಗಾ; ಪ್ರತಿಯೊಬ್ಬರೂ ಬದುಕಿನಲ್ಲಿ ಆಧ್ಯಾತ್ಮಿಕ ಮನೋಭಾವ ಬೆಳೆಸಿಕೊಂಡಾಗ ಜೀವನ ಸುಸೂತ್ರವಾಗಿ ನಡೆಯುತ್ತದೆ ಎಂದು ಶ್ರೀಧರ ಮುರಡಿ ಹಿರೇಮಠದ ಶ್ರೀ ಬಸವಲಿಂಗೇಶ್ವರ ಸ್ವಾಮೀಜಿ ಹೇಳಿದರು.

    ಇದನ್ನೂ ಓದಿ: ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ

    ತಾಲೂಕಿನ ಕರಮುಡಿ ಗ್ರಾಮದ ಶ್ರೀ ಕರವೀರಭದ್ರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ಪುರಾಣ ಪ್ರವಚನದಲ್ಲಿ ಶುಕ್ರವಾರ ಮಾತನಾಡಿದರು.

    ಮನುಷ್ಯನ ಬದುಕಿನಲ್ಲಿ ಕಷ್ಟಗಳು ಸಹಜ. ಅವುಗಳನ್ನು ಸ್ವೀಕರಿಸುವ ಮೂಲಕ ಎದುರಿಸುವ ಶಕ್ತಿ ರೂಢಿಸಿಕೊಳ್ಳಬೇಕು. ಕರಮುಡಿ ಗ್ರಾಮದಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮ ಜರುಗುತ್ತಿದ್ದು, ಅವುಗಳ ಸದುಪಯೋಗ ಪಡೆದು ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಗಣ್ಯರಾದ ಗಜಗಿನಹಾಳದ ವೀರೇಶ ಶಾಸ್ತ್ರಿ, ಯರಗೇರಾದ ಚಂದಾಲಿಂಗಯ್ಯ ಹಿರೇಮಠ, ವೀರಭದ್ರಯ್ಯ ಕೆಂಬಾವಿಮಠ, ವಿರೂಪಾಕ್ಷಪ್ಪ ಉಳ್ಳಾಗಡ್ಡಿ, ಗಂಗಪ್ಪ ಹವಳಿ, ಶಕುಂತಲಾ ಪಾಟೀಲ್, ಶರಣಗೌಡ ಪಾಟೀಲ್, ಚನ್ನಬಸಪ್ಪ ಗೊಂಗಡಶೆಟ್ಟಿ, ವೀರಣ್ಣ ನಿಂಗೋಜಿ, ಬಸವರಾಜ ಬಲಕುಂದಿ, ಉಮೇಶ ಕುಕನೂರು, ಮರ್ದಾನ್‌ಸಾಬ್ ಮುಲ್ಲಾ, ವೀರಣ್ಣ ಪಟ್ಟೇದ, ಕಳಕಪ್ಪ ಬೆಟಗೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts