More

    ಅಡಿಕೆ ಬೆಳೆಗಾರನಾದ ದಿಗಂತ್​ ಅನುಭವಿಸುತ್ತಿರುವ ಕಷ್ಟ ಅಷ್ಟಿಷ್ಟಲ್ಲ …

    ಬೆಂಗಳೂರು: ನಟ ದಿಗಂತ್​ ಚಿತ್ರದಿಂದ ಚಿತ್ರಕ್ಕೆ ವಿಭಿನ್ನವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಪುನೀತ್​ ರಾಜಕುಮಾರ್​ ಅಭಿನಯದ ‘ಯುವರತ್ನ’ ಚಿತ್ರದಲ್ಲಿ ಅವರು ಐಎಎಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು. ಈಗ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಎಂಬ ಹೊಸ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಅಡಿಕೆ ಬೆಳೆಗಾರರಾಗಿ ಕಾಣಿಸಿಕೊಂಡಿದ್ದು, ಒಬ್ಬ ಅಡಿಕೆ ಬೆಳೆಗಾರ ಅನುಭವಿಸುವ ಹಲವು ಕಷ್ಟ-ನಷ್ಟಗಳನ್ನು ಅವರು ಈ ಚಿತ್ರದಲ್ಲೂ ಅನುಭವಿಸಿದ್ದಾರಂತೆ.

    ಇದನ್ನೂ ಓದಿ: ಹೊಂಬಾಳೆ ಬ್ಯಾನರ್​ನಲ್ಲಿ ಪುನೀತ್​ ನಾಲ್ಕನೇ ಸಿನಿಮಾ!

    ಬಿಡುಗಡೆಗೂ ಮುನ್ನವೇ ಶೀರ್ಷಿಕೆ ಮೂಲಕವೇ ಜನಪ್ರಿಯವಾಗಿರುವ ಚಿತ್ರವೆಂದರೆ ಅದು ‘ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ’. ಸಾಗರ, ಸಿಗಂಧೂರು, ಬೆಂಗಳೂರಿನ ಸುಂದರ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರಕ್ಕೆ ಬೆಂಗಳೂರಿನ ಖ್ಯಾತ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ ಅಳವಡಿಸಲಾಗುತ್ತಿದೆ.‌ ಕೆಲವೆ ದಿನಗಳಲ್ಲಿ ಪ್ರಥಮಪ್ರತಿ‌ ಸಿದ್ಧವಾಗಲಿದೆ.

    ಉಪ್ಪಿ ಎಂಟರ್ ಟೈನರ್ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಪತ್ರಕರ್ತ ವಿನಾಯಕ ಕೋಡ್ಸರ ನಿರ್ದೇಶನದ ಮೊದಲ ಚಿತ್ರವಿದು‌. ಹಾಸ್ಯಮಯ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನಾಯಕ ಕೋಡ್ಸರ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ.

    ರಿಯಲ್​ ಲೈಫ್​ನ ಗಂಡ-ಹೆಂಡತಿ ದಿಗಂತ್ ಐಂದ್ರಿತಾ ರೇ ಈ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಮಿಕ್ಕಂತೆ ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್​, ಉಮಾಶ್ರೀ, ಪಿ.ಡಿ.ಸತೀಶ್‌ ಚಂದ್ರ, ಪ್ರಕಾಶ್ ತುಮ್ಮಿನಾಡ್ ಹಾಗೂ ನೀನಾಸಂನ ಹಲವು ಕಲಾವಿದರು ‌ಈ ಚಿತ್ರದಲ್ಲಿ ನಟಿಸಿದ್ದಾರೆ.

    ಇದನ್ನೂ ಓದಿ: ಸಾರಿಗೆ ನೌಕರರಿಂದ ನಟ ಯಶ್‌ಗೆ ಬಂತಂತೆ ಈ ಪತ್ರ: ನಿಜನಾ? ಸುಳ್ಳಾ…? ನೂರೆಂಟು ಪ್ರಶ್ನೆ…!

    ಪ್ರಜ್ವಲ್ ಪೈ ಅವರ ಸಂಗೀತ ನೀಡಿರುವ ಈ ಚಿತ್ರಕ್ಕೆ ನಂದಕಿಶೋರ್​ ಛಾಯಾಗ್ರಹಣ ಮಾಡಿದ್ದಾರೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ವೇಣು ಹಸ್ರಾಳಿ ಬರೆದಿದ್ದಾರೆ.

    ತಮಿಳಿನ ಸೂಪರ್​ ಹಿಟ್​ ಚಿತ್ರದ ಹಿಂದಿ ರೀಮೇಕ್​ನಲ್ಲಿ ರಣವೀರ್​ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts