ದಿಂಡಿ ಮಹೋತ್ಸವ ಸಂಪನ್ನ

blank

ತರೀಕೆರೆ: ತಾಲೂಕಿನ ಲಕ್ಕವಳ್ಳಿಯಲ್ಲಿ ಭಾವಸಾರ ಕ್ಷತ್ರಿಯ ಮಂಡಳಿಯಿಂದ ಆಯೋಜಿಸಿದ್ದ ದಿಂಡಿ ಮಹೋತ್ಸವ ಸಂಭ್ರಮದಿಂದ ಜರುಗಿತು.

ಪ್ರಮುಖ ರಸ್ತೆಗಳಲ್ಲಿ ವಿಠ್ಠಲ-ರುಕ್ಮಿಣಿ ದೇವರ ಮೆರವಣಿಗೆ ನಡೆಸಿ ದೇಗುಲದಲ್ಲಿ ಹರಿಭಕ್ತ ಪರಾಯಣ ಮಾಡಲಾಯಿತು. ಹನುಮಂತರಾವ್ ರಂಗದೋಳ್ ಅವರಿಂದ ಕಾಲ ಕೀರ್ತನೆ ನಡೆಸಿದ ಬಳಿಕ, ವಿಠ್ಠಲ ರಾವ್ ತೇಲ್ಕರ್ ಅವರಿಂದ ದಿಂಡಿ ಉತ್ಸವದ ಪ್ರವಚನ ಹಾಗೂ ಭಜನೆ, ಸಂತ ಪೂಜೆ, ಪಂಡರಿ ಸಂಪ್ರದಾಯ ಭಜನೆ ನೆರವೇರಿಸಲಾಯಿತು.
ದೇವರಿಗೆ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ವಿನಿಯೋಗಿಸಿದ ಬಳಿಕ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಮೂರು ಗಂಟೆಯವರೆಗೆ ಸನ್ನಿಧಿಯಲ್ಲಿ ಮಹಿಳಾ ಮಂಡಳಿಯಿಂದ ಭಜನೆ ನಡೆಯಿತು. ಭಾವಸಾರ ಕ್ಷತ್ರೀಯ ಸಮಾಜದ ಅಧ್ಯಕ್ಷ ಬಿ.ಎಂ.ಉದಯಕುಮಾರ್ ಜಂಗಾಡೆ, ಕಾರ್ಯದರ್ಶಿ ಶಂಕರರಾವ್ ಬಾಂಗ್ರೆ ಇತರರಿದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…