More

    ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ : ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​ ಸೂಚನೆ

    ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್​ಆರ್​ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್​ ನಾಯಕರಿಗೆ ದಿನೇಶ್​ ಗುಂಡೂರಾವ್​ ಸೂಚನೆ ನೀಡಿದ್ದಾರೆ.

    “ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್​ನ ಹಿರಿಯ ನಾಯಕ ದಿನೇಶ್​ ಗುಂಡೂರಾವ್​ ತಿಳಿಸಿದ್ದಾರೆ.

    ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts