ಶಿರಡಿ: ಸಾಯಿ ಬಾಬಾನ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ತಂಗಲು ಮತ್ತು ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಏನೂ ತೊಂದರೆ ಇಲ್ಲ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಕ್ ಮುಗ್ಲಿಕರ್ ತಿಳಿಸಿದ್ದಾರೆ.
ನಾಳೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.
ಮಾಧ್ಯಮಗಳಲ್ಲಿ ಇಂದು (ಜ.19)ದಿಂದ ಸಾಯಿಬಾಬಾನ ದೇಗುಲ ಬಂದ್ ಇರುತ್ತದೆ ಎಂದು ಸುದ್ದಿಯಾಗಿತ್ತು. ಆದರೆ ದೇವಾಸ್ಥಾನ ತೆರೆದಿದ್ದು, ಬಂದ ಭಕ್ತರಿಗೆ ದರ್ಶನಕ್ಕೆ, ತಂಗಲು ಹಾಗೂ ಪ್ರಸಾದಕ್ಕೆ ತೊಂದರೆ ಇಲ್ಲ ಎಂದು ಮುಗ್ಲಿಕರ್ ಮಾಹಿತಿ ನೀಡಿದ್ದಾರೆ.
ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಭಾನಿ ಜಿಲ್ಲೆಯ ಪಥ್ರಿ ಎಂಬ ಗ್ರಾಮವೇ ಸಾಯಿ ಬಾಬಾ ಅವರ ಜನ್ಮ ಸ್ಥಳ ಎಂದು ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಉದ್ಧವ್ ಠಾಕ್ರೆ ಅವರ ಈ ಹೇಳಿಕೆಯಿಂದಾಗಿ ಶಿರಡಿಯ ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್ ಭಾನುವಾರದಿಂದ ದೇಗುಲ ಬಂದ್ ಮಾಡಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿತ್ತು. (ಏಜೆನ್ಸೀಸ್)