ಶಿರಡಿ: ಸಾಯಿ ಬಾಬಾನ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ತೆರೆದಿರುತ್ತದೆ ದೇವಾಸ್ಥಾನ ಎಂದು ಶಿರಡಿ ಸಾಯಿ ದೇಗುಲದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಕ್ ಮುಗ್ಲಿಕರ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ಭಾನುವಾರ (ಜ.19)ದಿಂದ ಸಾಯಿಬಾಬಾನ ದೇಗುಲ ಬಂದ್ ಇರುತ್ತದೆ ಎಂದು ಸುದ್ದಿಯಾಗಿತ್ತು. ಆದರೆ ದೇವಾಸ್ಥಾನ ತೆರೆದಿದ್ದು, ಬಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಭಾನಿ ಜಿಲ್ಲೆಯ ಪಥ್ರಿ ಎಂಬ ಗ್ರಾಮವೇ ಸಾಯಿ ಬಾಬಾ ಅವರ ಜನ್ಮ ಸ್ಥಳ ಎಂದಿದ್ದರು. ಅಲ್ಲದೆ ಈ ಬಾರಿ ಬಜೆಟ್ನಲ್ಲಿ ಸಾಯಿ ಬಾಬಾ ಜನ್ಮ ಸ್ಥಳವಾದ ಪಥ್ರಿ ಅಭಿವೃದ್ಧಿಗೆ 100 ಕೋಟಿ ರೂಪಾಯಿಗಳ ಅನುದಾನ ನೀಡಲಾಗುವುದು ಎಂದು ಘೋಷಿಸಿದ್ದರು.
ಉದ್ಧವ್ ಠಾಕ್ರೆ ಅವರ ಈ ಹೇಳಿಕೆಯಿಂದಾಗಿ ವಿವಾದ ಉಂಟಾಗಿತ್ತು. ಈ ನಡುವೆ ಶಿರಡಿಯ ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಭಾನುವಾರದಿಂದ ದೇಗುಲ ಬಂದ್ ಮಾಡಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿತ್ತು.
ಆದರೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಕ್ ಮುಗ್ಲಿಕರ್ ಅದನ್ನು ಅಲ್ಲಗಳೆದಿದ್ದಾರೆ. (ಏಜೆನ್ಸೀಸ್)
Maharashtra: Devotees visit Shirdi Sai Baba temple amid bandh called today in #Shirdi town, against CM Uddhav Thackeray's reported comment calling Pathri (in Parbhani) as Sai Baba's birthplace. pic.twitter.com/z5nPzxMiFZ
— ANI (@ANI) January 19, 2020