More

    ‘ಕುರುನಾಡು’, ‘ಬಿಂಬ’ ಚಿತ್ರಗಳ ನಿರ್ದೇಶಕ ಜಿ.ಮೂರ್ತಿ ನಿಧನ

    ಬೆಂಗಳೂರು: ಕಲಾನಿರ್ದೇಶಕ, ನಿರ್ದೇಶಕ ಮತ್ತು ನಿರ್ಮಾಪಕ ಜಿ.ಮೂರ್ತಿ (56 ವರ್ಷ) ಶನಿವಾರ ಮಧ್ಯಾಹ್ನ ಒಂದು ಗಂಟೆಗೆ ಅಗಲಿದ್ದಾರೆ. ಮನೆಯಲ್ಲಿ ಜಾರಿ ಬಿದ್ದು ಅವರ ತಲೆಗೆ ಪೆಟ್ಟಾಗಿತ್ತು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಅವರು ಬ್ರೈನ್‌ ಹ್ಯಾಮರೇಜ್‌ನಿಂದಾಗಿ ನಿಧನರಾಗಿದ್ದಾರೆ.

    ಇದನ್ನೂ ಓದಿ: ಬಿಡುಗಡೆಯಾದ ಒಂದೇ ದಿನದಲ್ಲಿ ಪೈರಸಿಯಾದ ‘ಮಿರ್ಜಾಪುರ್​ – 2’

    ಜಿ.ಮೂರ್ತಿ ಅವರು ಹಿರಿಯ ಚಿತ್ರನಿರ್ದೇಶಕ ಜಿ.ವಿ.ಅಯ್ಯರ್‌ ಅವರ ನಿಕಟವರ್ತಿಯಾಗಿದ್ದರು. ಅಯ್ಯರ್‌ ಅವರ ಸಿನಿಮಾಗಳಿಗೆ ಕಲಾನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಪಿ.ಕೃಷ್ಣಮೂರ್ತಿ ಅವರಿಗೆ ಸಹಾಯಕರಾಗಿ ಮೂರ್ತಿಯವರು ವೃತ್ತಿ ಆರಂಭಿಸಿದ್ದರು. ಮುಂದೆ ಸ್ವತಂತ್ರ ಕಲಾನಿರ್ದೇಶಕರಾಗಿ 80ಕ್ಕೂ ಹೆಚ್ಚು ಸಿನಿಮಾಗಳಿಗೆ ಕಾರ್ಯನಿರ್ವಹಿಸಿದರು. ಈ ಪಟ್ಟಿಯಲ್ಲಿ ಕನ್ನಡವಷ್ಟೇ ಅಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರಗಳೂ ಸೇರಿವೆ.

    ‘ಚಂದ್ರ ಚಕೋರಿ’ ಮತ್ತು ‘ಕುರುನಾಡು’ ಚಿತ್ರಗಳ ಅತ್ಯುತ್ತಮ ಕಲಾನಿರ್ದೇಶನಕ್ಕಾಗಿ ಅವರಿಗೆ ಎರಡು ಬಾರಿ ರಾಜ್ಯಪ್ರಶಸ್ತಿ ಸಂದಿದೆ. ‘ಕುರುನಾಡು’ ಅವರ ನಿರ್ದೇಶನದ ಚಿತ್ರವೂ ಹೌದು. ಅವರ ನಿರ್ದೇಶನದ ‘ಶಂಕರ ಪುಣ್ಯಕೋಟಿ’ ಚಿತ್ರಕ್ಕೆ ಮೂರನೇ ಅತ್ಯುತ್ತಮ ಚಿತ್ರ ರಾಜ್ಯಪ್ರಶಸ್ತಿ (2008-09) ಗೌರವ ಸಂದಿದೆ. ‘ವೈಷ್ಣವಿ’, ‘ಹಳ್ಳಿಯ ಮಕ್ಕಳು’, ‘ಅರಳುವ ಹೂಗಳು’, ‘ಸಿದ್ಧಗಂಗ’, ‘ಸುಗಂಧಿ’ ಸೇರಿದಂತೆ ಒಟ್ಟು ಅವರು ಎಂಟು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

    ಇದನ್ನೂ ಓದಿ: ‘ಯುವರತ್ನ’ ಮೋಷನ್​ ಪೋಸ್ಟರ್​ ಬಿಡುಗಡೆ; ಇದು ಅಭಿಮಾನಿಗಳ ಉಡುಗೊರೆ

    ನಟ ಶ್ರೀನಿವಾಸ ಪ್ರಭು ಅವರ ಜೊತೆಗೂಡಿ ‘ಬಿಂಬ’ ಸಿನಿಮಾ ನಿರ್ಮಿಸಿ, ನಿರ್ದೇಶಿಸಿದ್ದರು. ಒಂದೇ ಶಾಟ್‌ನಲ್ಲಿ ಒಬ್ಬನೇ ಕಲಾವಿದ ಅಭಿನಯಿಸಿದ್ದ ಜಗತ್ತಿನ ಮೊದಲ ಚಿತ್ರವಾಗಿ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದೆ. ಜಿ.ಮೂರ್ತಿ ನಿರ್ದೇಶನದ ಸಿನಿಮಾಗಳು ದೇಶ, ವಿದೇಶಗಳ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿವೆ. ಮೂರ್ತಿ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

    ಕೋಮಲ್​ ಸಿನಿಮಾ ಬಗ್ಗೆ ಮೋದಿ ಮಾತಾಡಿದ್ದಾರೆ ನೋಡಿ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts