More

    ಜಯಂತ ಕಾಯ್ಕಿಣಿ ‘ಹಾಲಿನ ಮೀಸೆ’ ಕಥೆ ಆಧರಿತ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರಕ್ಕೆ ಸ್ಪೇನ್ ದೇಶದಲ್ಲೂ ಪ್ರಶಸ್ತಿ

    ಬೆಂಗಳೂರು: ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ ಕನ್ನಡ ಚಿತ್ರವು ಸ್ಪೇನ್ ದೇಶದ ಮ್ಯಾಡ್ರಿಡ್ ನಗರದಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲೂ ಪ್ರಶಸ್ತಿಗೆ ಭಾಜನವಾಗಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಉಡುಪಿಯ ಬಾಲನಟ ದೃಶಾ ಕೊಡಗು ಅವರಿಗೆ ಶ್ರೇಷ್ಠ ಬಾಲನಟ ಪ್ರಶಸ್ತಿ ದೊರಕಿದೆ. ಈ ಚಿತ್ರಕ್ಕೆ ಈ ಮೊದಲು ರೋಂ ನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಶ್ರೇಷ್ಟ ಚಿತ್ರವೆಂದು ವಿಮರ್ಶಕರ ಪ್ರಶಸ್ತಿಗೆ ಭಾಜನ ವಾಗಿದ್ದರೆ, ಕಳೆದ ತಿಂಗಳು ಜರ್ಮನಿಯ ಸ್ಟುಟ್ ಗಾರ್ಟ್ ಚಿತ್ರೋತ್ಸವದಲ್ಲಿ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಗಳಿಸಿತ್ತು. ಇದೀಗ ಪ್ರಶಸ್ತಿ ಪಡೆಯುವ ಸರದಿ ಚಿತ್ರದ ಮುಖ್ಯ ಪಾತ್ರಧಾರಿ ನಟನದ್ದಾಗಿದೆ.

    ಇದನ್ನೂ ಓದಿ: ನನ್ನ ಸಾವಿಗೆ ನಟ ಸಾಹಿಲ್‌ ಕಾರಣ- ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ‘ಮಿಸ್ಟರ್ ಇಂಡಿಯಾ ಬಾಡಿ ಬಿಲ್ಡರ್‌’

    ಖ್ಯಾತ ರಂಗ ನಿರ್ದೇಶಕ, ಚಿತ್ರ ನಿರ್ದೇಶಕ, ಕಲಾ ನಿರ್ದೇಶಕ ಹಾಗೂ ಚಿತ್ರಕಲಾವಿದ ಬಾಸುಮ ಕೊಡಗು ಅವರ ಮಗನಾದ ದೃಶಾ ಅವರು ಕಟ್ಪಾಡಿಯ ಎಸ್.ವಿ ಎಸ್ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದು, ಅನೇಕ ಕಿರು ಚಿತ್ರಗಳಲ್ಲಿ, ರಂಗ ನಾಟಕಗಳಲ್ಲಿ ಅಭಿನಯಿದ್ದಾರೆ. ಸಂಗೀತ ಮತ್ತು ಸಾಹಿತ್ಯದಲ್ಲೂ ಆಸಕ್ತಿ ಇರುವ ದೃಶಾ ಕಲಾವಿದರ ಕುಟುಂಬದ ಕುಡಿಯಾಗಿದ್ದಾರೆ. ಈ ಮೂಲಕ ಭಾಗವಹಿಸಿದ ನಾಲ್ಕು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೂರರಲ್ಲಿ ಪ್ರಶಸ್ತಿ ಪಡೆದ ಹೆಗ್ಗಳಿಗೆ ಈ ಚಿತ್ರದ್ದಾಗಿದೆ.

    ಗಿರೀಶ ಕಾಸರವಳ್ಳಿ ನಿರ್ದೇಶನದ ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಎಸ್.ವಿ ಶಿವ ಕುಮಾರ್ ಅವರು ತಮ್ಮ ಸಂಗಮ ಫಿಲಂಸ್ ಲಾಂಛನದಲ್ಲಿ ತಯಾರಿಸಿದ್ದಾರೆ. ಕವಿ, ಸಾಹಿತಿ ಜಯಂತ ಕಾಯ್ಕಿಣಿಯವರ ಹಾಲಿನ ಮೀಸೆ ಕಥೆಯನ್ನಾಧರಿಸಿದೆ. ಸಮಕಾಲೀನ ಭಾರತದ ಬಹು ಮುಖ್ಯ ಸಮಸ್ಯೆಗಳಲ್ಲೊಂದಾದ ಐಡೆಂಟಿಟಿಯ ಪ್ರಶ್ನೆ ಚಿತ್ರದ ಹೂರಣ.

    ಇದನ್ನೂ ಓದಿ:  VIDEO: ಮಯೂರಿ ಮಗನಿಗೆ ಅರ್ಧವಾರ್ಷಿಕ ಹುಟ್ಟುಹಬ್ಬದ ಸಂಭ್ರಮ: ವಿಡಿಯೋ ಶೇರ್‌ ಮಾಡಿದ ನಟಿ

    ದ್ವೀಪ ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಹೆಚ್.ಎಂ.ರಾಮಚಂದ್ರ ಹಾಲ್ಕೆರೆ ಅವರ ಛಾಯಾಗ್ರಹಣ ಇರುವ ಈ ಚಿತ್ರಕ್ಕೆ ಎಸ್.ಆರ್. ರಾಮಕೃಷ್ಣ ಅವರ ಸಂಗೀತವಿದೆ. ಎಸ್. ಗುಣ ಶೇಖರನ್ ಅವರ ಸಂಕಲನ ಇದ್ದು ಅಪೂರ್ವ ಕಾಸರವಳ್ಳಿ ಜಂಟಿ ನಿರ್ದೇಶನ ಇದೆ. ಆರಾಧ್ಯ, ಪ್ರವರ್ಥ ರಾಜು, ನಲ್ಮೆ, ಪವಿತ್ರ, ಮಾಲತೇಶ್. ಕೆ.ಜಿ.ಕೃಷ್ಣಮೂರ್ತಿ, ಚೆಸ್ವಾ, ರಶ್ಮಿ, ಬಿ.ಎಂ. ವೆಂಕಟೇಶ್, ಪುಷ್ಪಾ ರಾಘವೇಂದ್ರ, ಸುಜಾತ ಶೆಟ್ಟಿ ಮೊದಲಾದವರಿದ್ದಾರೆ. ಇದು ಕಾಸರವಳ್ಳಿಯವರ 15 ನೇ ಕಥಾ ಚಿತ್ರ. ಹಾಗೆಯೇ ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸುತ್ತಾ ಬಂದಿರುವ ನಿರ್ಮಾಪಕ ಎಸ್.ವಿ ಶಿವಕುಮಾರರ 3 ನೇ ಕಥಾ ಚಿತ್ರವೂ ಇದಾಗಿದೆ.

    VIDEO: ನಾನು ಉಳಿಯುವಂತೆ ಕಾಣ್ತಿಲ್ಲ- ಏನಾದ್ರೂ ಆದ್ರೆ ಎಲ್ರೂ ಸೇರಿ ಮರ್ಡರ್‌ ಮಾಡಿದ್ದೀರಿ ಎಂದುಕೊಳ್ಳಿ- ನಟಿ ಕಣ್ಣೀರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts