More

    ಅಲ್ಲು ಅರ್ಜುನ್​ಗೆ ಪ್ರಶಾಂತ್ ನೀಲ್ ನಿರ್ದೇಶನ?

    ಬೆಂಗಳೂರು: ಕೆಜಿಎಫ್ ಸಿನಿಮಾ ಖ್ಯಾತಿಯ ಪ್ರಶಾಂತ್ ನೀಲ್, ಕನ್ನಡಕ್ಕಿಂತ ತೆಲುಗಿನಲ್ಲಿ ಹೆಚ್ಚಿನ ಡಿಮಾಂಡ್ ಕ್ರಿಯೇಟ್ ಮಾಡಿಕೊಂಡಿದ್ದಾರೆ. ಅಲ್ಲಿನ ಸ್ಟಾರ್ ನಟರ ಸಿನಿಮಾಗಳ ನಿರ್ದೇಶನಕ್ಕೆ ಸಂಬಂಧಪಟ್ಟಂತೆ ಪ್ರಶಾಂತ್ ಹೆಸರು ಆಗಾಗ ತಳುಕು ಹಾಕಿಕೊಳ್ಳುತ್ತಲೇ ಇರುತ್ತದೆ. ಇದೀಗ ಅಂಥದ್ದೆ ಮತ್ತೊಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ನಟ ಅಲ್ಲು ಅರ್ಜುನ್ ಚಿತ್ರಕ್ಕೆ ಪ್ರಶಾಂತ್ ನೀಲ್ ಆಕ್ಷನ್-ಕಟ್ ಹೇಳಲಿದ್ದಾರಂತೆ!

    ಹೌದು, ಈಗಾಗಲೇ ಕೆಜಿಎಫ್ ಚಾಪ್ಟರ್ 2 ಬಿಡುಗಡೆಗೆ ಸಿದ್ಧವಾಗಿದೆ. ಪ್ರಭಾಸ್ ಜತೆಗಿನ ‘ಸಲಾರ್’ ಸಿನಿಮಾ ಶೂಟಿಂಗ್​ನಲ್ಲಿ ನೀಲ್ ಬಿಜಿಯಾಗಿದ್ದಾರೆ. ಇನ್ನೇನು ಕೆಲ ತಿಂಗಳಲ್ಲಿ ‘ಸಲಾರ್’ ಸಮಾಪ್ತಿಯಾಗುತ್ತದೆ. ಅದು ಮುಗಿಯುತ್ತಿದ್ದಂತೆ ಅಲ್ಲು ಅರ್ಜುನ್ ಜತೆ ಕೈ ಜೋಡಿಸಿಲಿದ್ದಾರಂತೆ. ಈ ಚಿತ್ರಕ್ಕೆ ಸ್ವತಃ ಅರ್ಜುನ್ ಹೋಮ್ ಬ್ಯಾನರ್ ಗೀತಾ ಆರ್ಟ್ಸ್ ಬಂಡವಾಳ ಹೂಡಲಿದೆಯಂತೆ.

    ಅಲ್ಲು ಅರ್ಜುನ್ ಅವರ ‘ಪುಷ್ಪ’ ಚಿತ್ರ ಆಗಸ್ಟ್ 8ಕ್ಕೆ ಬಿಡುಗಡೆ ಆಗಲಿದೆ. ಅದಾದ ಬಳಿಕ ಮುಂದಿನ ಸಿನಿಮಾದ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಈ ನಡುವೆ 2022ರ ಏಪ್ರಿಲ್ ವೇಳೆಗೆ ನಿರ್ದೇಶಕ ಕೊರಟಾಲ ಶಿವ ಜತೆಗೊಂದು ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆಯಾದರೂ ಅದಿನ್ನು ಕನ್ಪಮ್ರ್ ಆಗಿಲ್ಲ. -ಏಜೆನ್ಸೀಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts