More

    ಆದೇಶ ಉಲ್ಲಂಘಿಸಿ ಕಾಮಗಾರಿ ತಡೆಯಿರಿ

    ರಾಯಚೂರು: ನಗರದ ಯರಗೇರಾ ರಸ್ತೆಯಲ್ಲಿರುವ ಹಜರತ್ ಕರಿಮುಲ್ಲಾ ಖಾದ್ರಿ ದರ್ಗಾದ ಆವರಣದಲ್ಲಿ ವಕ್ಫ್ ಮಂಡಳಿ ಆದೇಶ ಉಲ್ಲಂಘಿಸಿ ನಡೆಯುತ್ತಿರುವ ಕಾಮಗಾರಿಯನ್ನು ತಡೆಯಬೇಕು ಎಂದು ಆಮ್ ಆದ್ಮಿ ಜಿಲ್ಲಾ ಘಟಕ ಒತ್ತಾಯಿಸಿದ್ದಾರೆ.
    ಪಕ್ಷದ ನಿಯೋಗ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಶುಕ್ರವಾರ ಮನವಿ ಸಲ್ಲಿಸಿ, ಸರ್ವೆ ನಂ.1179/1ರಲ್ಲಿ ಬರುವ ದರ್ಗಾ ವಕ್ಫ್ ಮಂಡಳಿ ಅಡಿಯಲ್ಲಿ ಬರುತ್ತಿದೆ. ಮಂಡಳಿ ಯಥಾ ಸ್ಥಿತಿ ಕಾಪಾಡುವಂತೆ ಆದೇಶಿಸಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂದು ದೂರಿದರು.
    ವಕ್ ಮಂಡಳಿಯಿಂದ ಜಿಲ್ಲಾಧಿಕಾರಿಗಳಿಗೆ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದ್ದರೂ ಕಾಮಗಾರಿಯನ್ನು ಮುಂದುವರಿಸಲಾಗಿದೆ. ಆದರೆ ಜಿಲ್ಲಾಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕೂಡಲೇ ಕಾಮಗಾರಿ ಸ್ಥಗಿತಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ನಿಯೋಗದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಿ.ವೀರೇಶಕುಮಾರ, ಪದಾಕಾರಿಗಳಾದ ಡಾ.ಎಂ.ಡಿ.ವಾಹೀದ್, ಶೇಕ್ಷಾವಲಿ, ಮಕ್ಬೂಲ್ ಪಾಷಾ, ಸೈಯದ್ ಜಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts