ಸ್ವ ಉದ್ಯೋಗದತ್ತ ಯುವಜನಾಂಗದ ಚಿತ್ತ

scholership

ಗಂಗೊಳ್ಳಿ: ವಿದ್ಯಾಭ್ಯಾಸ ಕೇವಲ ಪುಸ್ತಕ ಓದಿಗೆ ಮಾತ್ರ ಸೀಮಿತವಾಗದೆ, ನಮ್ಮ ಜ್ಞಾನ ಹಾಗೂ ಕೌಶಲ ಬೆಳೆಸುವಂತಿರಬೇಕು. ಜೀವನದಲ್ಲಿ ಕಲಿಕೆ ನಿರಂತರ. ಸ್ವ ಉದ್ಯೋಗದತ್ತ ಯುವ ಜನಾಂಗ ಮನಸ್ಸು ಮಾಡಬೇಕು ಎಂದು ಕರ್ಣಾಟಕ ಬ್ಯಾಂಕ್ ಉಡುಪಿ ಶಾಖೆಯ ಸೀನಿಯರ್ ಮ್ಯಾನೇಜರ್ ರವೀಂದ್ರ ಶ್ಯಾನುಭಾಗ್ ಹೇಳಿದರು.

ಗಂಗೊಳ್ಳಿ ಶ್ರೀ ಸರಸ್ವತಿ ವಿದ್ಯಾನಿಧಿ ವತಿಯಿಂದ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.

ಶ್ರೀ ಸರಸ್ವತಿ ವಿದ್ಯಾನಿಧಿ ಅಧ್ಯಕ್ಷ ಎಂ.ರವೀಂದ್ರ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸರಸ್ವತಿ ವಿದ್ಯಾನಿಧಿ ಸದಸ್ಯರಾದ ಡಾ.ಕಾಶೀನಾಥ ಪೈ, ಜಿ.ಗೋವಿಂದ್ರಾಯ ಆಚಾರ್ಯ, ಜಿ.ವೆಂಕಟೇಶ ಶೆಣೈ, ವಾಮನ ಎಸ್.ಪೈ, ಎಂ.ನಾಗೇಂದ್ರ ಪೈ, ಎಂ.ಅನಂತ ಪೈ ಮೊದಲಾದವರು ಉಪಸ್ಥಿತರಿದ್ದರು.

ಪತ್ರಕರ್ತ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಶ್ರೀ ಸರಸ್ವತಿ ವಿದ್ಯಾನಿಧಿಯ ಮಾಜಿ ಅಧ್ಯಕ್ಷ ಎನ್.ಸದಾಶಿವ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಕೆ.ರಾಮನಾಥ ನಾಯಕ್ ವಿದ್ಯಾರ್ಥಿಗಳ ಪಟ್ಟಿ ವಾಚಿಸಿ ವಂದಿಸಿದರು.

Share This Article

ಬೇಯಿಸಿದ ಆಲೂಗಡ್ಡೆಯನ್ನು ಹೆಚ್ಚು ಕಾಲ ಬಳಸಲು ಫ್ರಿಡ್ಜ್‌ನಲ್ಲಿ ಇಡಬಹುದೇ; ತಜ್ಞರು ಹೇಳುವುದೇನು? | Health Tips

ಬೇಯಿಸಿದ ಆಲೂಗಡ್ಡೆಯನ್ನು ಫ್ರಿಡ್ಜ್‌ನಲ್ಲಿ ಇಡುವುದು ಅನೇಕ ಜನರಿಗೆ ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಅವುಗಳನ್ನು ಸಂಗ್ರಹಿಸಲು ಇದು…

ಈ ಕೆಟ್ಟ ಅಭ್ಯಾಸಗಳಿಂದ ಮಹಿಳೆಯರು ಗರ್ಭಧರಿಸಲು ಸಾಧ್ಯವಾಗುವುದಿಲ್ಲ; ತಿಳಿದುಕೊಳ್ಳಲೇಬೇಕಾದ ಮಾಹಿತಿ |Health Tips

ಥೈರಾಯ್ಡ್, ಪಿಸಿಓಎಸ್ ಮತ್ತು ಇತರ ಹಾರ್ಮೋನುಗಳ ಬದಲಾವಣೆಗಳಂತಹ ಹಲವು ಕಾರಣಗಳಿಂದ ಮಹಿಳೆಯರ ಬಂಜೆತನ ಉಂಟಾಗಬಹುದು. ಇದು…

ಇಲ್ಲಿ ಮಹಿಳೆಯರು ಬಿಕಿನಿ ಧರಿಸುವಂತಿಲ್ಲ; ಉಲ್ಲಂಘನೆ ಮಾಡಿದ್ರೆ ಆಗುತ್ತೆ ಕಠಿಣ ಶಿಕ್ಷೆ; ಎಲ್ಲಿ ಗೊತ್ತೆ? | Bikinis

Bikinis : ಸಾಮಾನ್ಯವಾಗಿ ಬೀಚ್​ಗಳಲ್ಲಿ ಯುವತಿಯರು ಸೇರಿದಂತೆ ಮಹಿಳೆಯರು ಬಿಕಿನಿ ಧರಿಸಿ ಓಡಾಡುತ್ತಾರೆ. ಅಲ್ಲದೆ, ನಮ್ಮದೆ…