ಎಂಆರ್‌ಪಿಎಲ್‌ನಿಂದ ಸಿರಿಧಾನ್ಯ ವಿತರಣೆ

Kin_MRPL

ಸುರತ್ಕಲ್: ಎಂ.ಆರ್.ಪಿ.ಎಲ್. ಸಂಸ್ಥೆ ಸಿ.ಎಸ್.ಆರ್. ಅನುದಾನದ ಮೂಲಕ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದು, ಮಾದರಿ ಸಂಸ್ಥೆಯಾಗಿ ಮೂಡಿಬಂದಿದೆ ಎಂದು ಎಂ.ಆರ್.ಪಿ.ಎಲ್ ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು.

ಎಂಆರ್‌ಪಿಎಲ್ ವತಿಯಿಂದ ಎಂಡೋಸಲ್ಫಾನ್, ಎಚ್.ಐ.ವಿ., ರಕ್ತ ಬಲಹೀನತೆ, ಕ್ಷಯದಿಂದ ಬಳಲುವವರಿಗೆ ವೃದ್ಧಾಶ್ರಮ, ಮತ್ತಿತರ ಕಡೆಗಳಿಗೆ 20 ಲಕ್ಷ ರೂ. ಬೆಲೆಬಾಳುವ ಪೌಷ್ಟಿಕಾಂಶಯುಕ್ತ ಸಿರಿಧಾನ್ಯ ವಿತರಿಸಿ ಮಾತನಾಡಿದರು.

ಎಂ.ಆರ್.ಪಿ.ಎಲ್. ಈ ಹಿಂದೆಯೂ ಎಂಡೋಸಲ್ಫಾನ್ ಪೀಡಿತರಾಗಿದ್ದು, ಮಲಗಿದಲ್ಲಿಯೇ ಇದ್ದ ಕುಟುಂಬಗಳಿಗೆ ದಿನ ಬಳಕೆಯ ವಸ್ತುಗಳನ್ನು ನೀಡಿದ್ದು, ವೃದ್ಧಾಶ್ರಮ ಮತ್ತು ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ವಾಹನ ನೀಡಿ ಸಹಕಾರ ನೀಡಿದೆ. ಇದೀಗ ಅನಾರೋಗ್ಯದಿಂದ ಬಳಲುವ 1,500 ಲಾನುಭವಿಗಳಿಗೆ ಸಿರಿಧಾನ್ಯ ನೀಡಿ ಸಹಕಾರ ನೀಡಲಾಗಿದೆ. ಲಾನುಭವಿಗಳು ಇದರಿಂದ ತಮ್ಮ ಆರೋಗ್ಯ ವೃದ್ಧಿಸಬಹುದಾಗಿದೆ. ಒಟ್ಟು 20 ಲಕ್ಷ ರೂ. ಬೆಲೆಬಾಳುವ 1,800 ಕಿಲೋ ಸಿರಿಧಾನ್ಯ ವಿತರಿಸಲಾಗಿದ್ದು, ಹೆಚ್ಚಿನ ಕಡೆಗಳಿಗೆ ತೆರಳಿ ನೇರವಾಗಿ ಲಾನುಭವಿಗಳಿಗೆ ನೀಡಲಾಗಿದೆ ಎಂದರು.

ಎಂ.ಆರ್.ಪಿ.ಎಲ್. ಅಧಿಕಾರಿ ಸ್ಟೀವನ್ ಪಿಂಟೋ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

೧೪ರಂದು ಟೌನ್ ಬ್ಯಾಂಕ್ ವಿಟ್ಲ ಶಾಖೆ ಉದ್ಘಾಟನೆ

ಆರ್‌ಐ ಕಚೇರಿ ಮೇಜಿನ ಗಾಜು ಪುಡಿ – ಹಕ್ಕುಪತ್ರ ತಕರಾರು ಹಿನ್ನೆಲೆಯಲ್ಲಿ ಗುದ್ದಿದ ಬಿಜೆಪಿ ಮುಖಂಡ

 

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…